ಕರಾವಳಿ

ಅಕ್ಟೋಬರ್ 28, 29ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ; ಬಂಟ ಪ್ರತಿಭೆಗಳಿಗಾಗಿ ಕ್ರೀಡಾಕೂಟ, ವಿಶ್ವ ಸಾಂಸ್ಕೃತಿಕ ವೈಭವ, ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿಕೆ

ಜಾಗತಿಕ ಬಂಟರ ಸಂಘಗಗಳ ಒಕ್ಕೂಟ ಮಂಗಳೂರು ವತಿಯಿಂದ ಅಕ್ಟೋಬರ್ 28, 29 ರಂದು ಉಡುಪಿಯ ಅಜ್ಜರಕಾಡುವಿನಲ್ಲಿ ವಿಶ್ವ ಬಂಟರ ಸಮ್ಮಿಲನ, ಕ್ರೀಡಾಕೂಟ ಹಾಗು ಹಾಗೂ ವಿಶ್ವ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಈ ಬಗ್ಗೆ ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳನ್ನ ನಡೆಸಲಾಗುತ್ತಿದೆ. ಈ ಸಮ್ಮಿಲನದಲ್ಲಿ ಜಗತ್ತಿನಾದ್ಯಂತ ಇರುವ ನೂರೈವತ್ತು ಬಂಟರ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂಬೈ, ಬೆಂಗಳೂರು, UAE ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು ಹತ್ತರಿಂದ ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕ್ರೀಡಾ ಸಂಗಮದಲ್ಲಿ ತ್ರೋಬಾಲ್, ಕಬಡ್ಡಿ. ವಾಲೀಬಾಲ್ ಮತ್ತು ಹಗ್ಗಜಗ್ಗಾಟವನ್ನ ಏರ್ಪಡಿಸಲಾಗುತ್ತಿದೆ. ಅದೇ ರೀತಿ ಸಾಂಸ್ಕೃತಿಕ ಸಂಭ್ರಮದಲ್ಲಿ ತಂಡಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ದೆಗಳನ್ನ ಏರ್ಪಡಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಮುದಾಯದ ಹಲವು ದಾನಿಗಳು ಸಂಪೂರ್ಣ ನೆರವು ನೀಡಲಿದ್ದಾರೆ ಎಂದು ಹೇಳಿದ ಅವರು ಕಾರ್ಯಕ್ರಮದ ಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಸಾಂಸ್ಕೃತಿಕ ಸಂಭ್ರಮದ ಸಂಚಾಲಕ ಚಂದ್ರಹಾಸ ಶೆಟ್ಟಿ, ಕ್ರೀಡಾ ಸಂಗಮ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಲಾರ್, ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

39 mins ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

53 mins ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

59 mins ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 hour ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

24 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

24 hours ago