ಕಾಟುಕುಕ್ಕೆ: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕೇರಳ ವನಿತಾ ಕಮಿಷನ್ ಸದಸ್ಯೆ ಕುಞಾಯಿಶ ಕರೆನೀಡಿದರು. ಪ್ರೀತಿ ಭಂಗದಂತಹ ಸಮಯದಲ್ಲಿ ವಿದ್ಯಾರ್ಥಿಗಳು ಆಕ್ರಮಣಕಾರಿಯಾಗಿ ವರ್ತಿಸುವ ನಡವಳಿಕೆಗೆದುರಾಗಿಯೂ ಅವರು ತಿಳಿಹೇಳಿದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ‘ಹದಿಹರೆಯದ ವಿದ್ಯಾರ್ಥಿಗಳನ್ನು ಶಕ್ತಿಪಡಿಸೋಣ’ ಎಂಬ ಕೇರಳ ರಾಜ್ಯದ ವನಿತಾ ಆಯೋಗ ನಡೆಸುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ ಎಸ್,ಶಾಲಾ ಮೆನೇಜರ್ ಮಿತ್ತೂರ್ ಪುರುಷೋತ್ತಮ ಭಟ್,ವಾರ್ಡ್ ಸದಸ್ಯ ,ಬಿ.ಎಸ್ ಗಾಂಭೀರ್,ಶಾಲಾ ಹೆಡ್ ಮಾಸ್ಟರ್ ಹರಿಪ್ರಸಾದ್ ಶೆಟ್ಟಿ,ಪಿ ಟಿ ಎ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ,ಆಡಳಿತ ಮಂಡಳಿ ಸದಸ್ಯ ನಿವೃತ್ತ ಶಾಲಾ ಅಧ್ಯಾಪಕ ಲೋಕನಾಥಾ ಶೆಟ್ಟಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಮದಲ್ಲಿ ಪ್ರಿನ್ಸಿಪಾಲ್ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ವಾಣಿ ಕೆ ವಂದಿಸಿದರು. ರಾಜೇಶ್ ಸಿ ಎಚ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಿರ್ಮಲ್ ಕುಮಾರ್ ಕಾರಡ್ಕ ಅವರ ತರಗತಿ ನಡೆಯಿತು. ಅಧ್ಯಾಪಕ ಸಂದೀಪ್ ಕುಮಾರ್ ನೇತೃತ್ವ ವಹಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…