ಮಂಗಳೂರು: ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬಿಜೆಪಿ ದೃಡವಾಗಿ ನಿಂತಿದೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶನಿವಾರ ಆಗಸ್ಟ್ 12 ರಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, “ನಾವು ಪ್ರಕರಣದ ಮರು ತನಿಖೆಗೆ ಒತ್ತಾಯಿಸುತ್ತೇವೆ, ಇದರಿಂದಾಗಿ ನಿಜವಾದ ಅಪರಾಧಿಯನ್ನು ಬಂಧಿಸಿ ಆ ಮೂಲಕ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುತ್ತದೆ.
ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ಮತ್ತು ಪ್ರಕರಣದ ಮರು ತನಿಖೆಗಾಗಿ ಆಗಸ್ಟ್ 27 ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ. ಮರುದಿನ ಬಿಜೆಪಿ ತನ್ನ ನಿಯೋಗದೊಂದಿಗೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆಗಳನ್ನು ಮುಂದಿಡಲಿದೆ ಎಂದು ನಳಿನ್ ಕಟೀಲ್ ಹೇಳಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ವೈ ಶೆಟ್ಟಿ, ರಾಜೇಶ್ ನಾಯ್ಕ್, ಹರೀಶ್ ಪೂಂಜಾ, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…