ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೆಷಿನ್‌‌ನಲ್ಲಿ ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು

ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಬಾಗಲಕೋಟ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ನಡೆದಿದೆ.
ಮನೆಯ ಅಂಗಳದ ಎದುರು ಹಸಿರು ಹುಲ್ಲು ತೆಗೆಯುತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಸಾವಿಡಾಗಿದ್ದಾನೆ. ಬಾಗಲಕೋಟ ನಿವಾಸಿ ಯಮನಪ್ಪ (38) ಮೃತಪಟ್ಟ ವ್ಯಕ್ತಿ. ಗುಡ್ಡೆಯಂಗಡಿ ನಿವಾಸಿ ಸೈಪುದ್ದೀನ್ ಎಂಬಾತನ ಮನೆಯ ಅಂಗಳದಲ್ಲಿ ಹುಲ್ಲನ್ನು ಮೆಷಿನ್ ಮೂಲಕ ಕತ್ತರಿಸುವ ವೇಳೆ ಈ ಘಟನೆ ನಡೆದಿದೆ.

ಮನೆಯ ಪಕ್ಕದಲ್ಲಿ ಕೊಳವೆಬಾವಿಯಿದ್ದು, ಇದರೊಳಗಿರುವ ಪಂಪ್ ಗೆ ನೀಡಲಾದ ವಿದ್ಯುತ್ ಸಂಪರ್ಕದ ತಂತಿಯಿದ್ದದ್ದನ್ನು ನೋಡದೆ ತುಂಡರಿಸಿದ್ದಾನೆ. ಈ ಕಾರಣದಿಂದ ವಿದ್ಯುತ್ ಹರಿದು ಈತ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಇಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ.ರಾಮಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!