ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೆಷಿನ್‌‌ನಲ್ಲಿ ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು

ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಬಾಗಲಕೋಟ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ನಡೆದಿದೆ.
ಮನೆಯ ಅಂಗಳದ ಎದುರು ಹಸಿರು ಹುಲ್ಲು ತೆಗೆಯುತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಸಾವಿಡಾಗಿದ್ದಾನೆ. ಬಾಗಲಕೋಟ ನಿವಾಸಿ ಯಮನಪ್ಪ (38) ಮೃತಪಟ್ಟ ವ್ಯಕ್ತಿ. ಗುಡ್ಡೆಯಂಗಡಿ ನಿವಾಸಿ ಸೈಪುದ್ದೀನ್ ಎಂಬಾತನ ಮನೆಯ ಅಂಗಳದಲ್ಲಿ ಹುಲ್ಲನ್ನು ಮೆಷಿನ್ ಮೂಲಕ ಕತ್ತರಿಸುವ ವೇಳೆ ಈ ಘಟನೆ ನಡೆದಿದೆ.

ಮನೆಯ ಪಕ್ಕದಲ್ಲಿ ಕೊಳವೆಬಾವಿಯಿದ್ದು, ಇದರೊಳಗಿರುವ ಪಂಪ್ ಗೆ ನೀಡಲಾದ ವಿದ್ಯುತ್ ಸಂಪರ್ಕದ ತಂತಿಯಿದ್ದದ್ದನ್ನು ನೋಡದೆ ತುಂಡರಿಸಿದ್ದಾನೆ. ಈ ಕಾರಣದಿಂದ ವಿದ್ಯುತ್ ಹರಿದು ಈತ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಇಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ.ರಾಮಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!