ಹುಲ್ಲು ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಬಾಗಲಕೋಟ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ನಡೆದಿದೆ.
ಮನೆಯ ಅಂಗಳದ ಎದುರು ಹಸಿರು ಹುಲ್ಲು ತೆಗೆಯುತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಸಾವಿಡಾಗಿದ್ದಾನೆ. ಬಾಗಲಕೋಟ ನಿವಾಸಿ ಯಮನಪ್ಪ (38) ಮೃತಪಟ್ಟ ವ್ಯಕ್ತಿ. ಗುಡ್ಡೆಯಂಗಡಿ ನಿವಾಸಿ ಸೈಪುದ್ದೀನ್ ಎಂಬಾತನ ಮನೆಯ ಅಂಗಳದಲ್ಲಿ ಹುಲ್ಲನ್ನು ಮೆಷಿನ್ ಮೂಲಕ ಕತ್ತರಿಸುವ ವೇಳೆ ಈ ಘಟನೆ ನಡೆದಿದೆ.
ಮನೆಯ ಪಕ್ಕದಲ್ಲಿ ಕೊಳವೆಬಾವಿಯಿದ್ದು, ಇದರೊಳಗಿರುವ ಪಂಪ್ ಗೆ ನೀಡಲಾದ ವಿದ್ಯುತ್ ಸಂಪರ್ಕದ ತಂತಿಯಿದ್ದದ್ದನ್ನು ನೋಡದೆ ತುಂಡರಿಸಿದ್ದಾನೆ. ಈ ಕಾರಣದಿಂದ ವಿದ್ಯುತ್ ಹರಿದು ಈತ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಇಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ.ರಾಮಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…