ಕರಾವಳಿ

ಭಾರತದ ನಾಳೆಗಳು ಇಂದಿನ ಯುವಜನತೆಯ ಮೇಲೆ ಅವಲಂಬಿತ: ಪ್ರೊ. ಸತ್ಯಂ ಸುವಾಸ್

ಮೂಡುಬಿದಿರೆ: ಸಣ್ಣ ಆವಿಷ್ಕಾರಗಳು ದೊಡ್ಡ ಬದಲಾವಣೆ ತರಲು ಸಾಧ್ಯ. ಹೊಸ ಆವಿಷ್ಕಾರಗಳನ್ನು ಗುರುತಿಸಿ ವಿದ್ರ‍್ಥಿಗಳಿಗೆ ಪ್ರೋತ್ಸಾಹಿಸುವುದರಿಂದ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆಯಾಗಬಲ್ಲದು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಮೆಟೀರಿಯಲ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಸತ್ಯಂ ಸುವಾಸ್ ಹೇಳಿದರು. ಮಿಜಾರಿನ ಆಳ್ವಾಸ್ ಎಂಜಿನಿಯರಿಆಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರ‍್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದ 46ನೇ ರಾಜ್ಯ ಮಟ್ಟದ ವಿದ್ರ‍್ಥಿ ಪ್ರಾಜೆಕ್ಟ್ಗಳ ವಿಚಾರ ಸಂಕಿರಣ ಮತ್ತು ಪ್ರ‍್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ತಾಂತ್ರಿಕ ಜ್ಞಾನ ಹೊಂದಿರುವ ಯುವಜನತೆ ದೇಶದ ಬೆಳವಣಿಗೆಗೆ ಉತ್ತಮ ಕೊಡುಗೆ. ವಿದ್ರ‍್ಥಿಗಳ ಆಸಕ್ತಿ ಹೊಸ ಆವಿಷ್ಕಾರಗಳನ್ನು ಹುಟ್ಟು ಹಾಕಿದೆ. ಪ್ರತಿಯೊಂದು ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸಿದಾಗ ದೇಶ ಅಭಿವೃದ್ಧಿ ಹೊಂದುತ್ತದೆ.

ಭಾರತದ ನಾಳೆಗಳು ಇಂದಿನ ಯುವಜನತೆಯ ಮೇಲೆ ಅವಲಂಬಿತವಾಗಿದೆ ಎಂದರು. ರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಸಿಎಸ್‌ಟಿ ರ‍್ಯರ‍್ಶಿ ಪ್ರೊ. ಅಶೋಕ್ ಎಂ. ರಾಯಚೂರು ಮಾತನಾಡಿ ವಿದ್ರ‍್ಥಿಗಳ ಯೋಜನೆಗಳು ಸ್ಥಳೀಯ ಸಮಸ್ಯೆಗಳನ್ನು ಸರಿದೂಗಿಸಲು ಸಹಕಾರಿಯಾಗಿರುವುದು ವಿಶೇಷ. ಹೀಗಾಗಿ ದೇಶದ ಅಭಿವೃದ್ಧಿಗೆ ಇವು ಪೂರಕವಾಗಲಿವೆ ಎಂದರು. ಕೆಎಸ್‌ಸಿಎಸ್‌ಟಿ ರ‍್ಯರ‍್ಶಿ ಪ್ರೊ. ಅಶೋಕ್ ಎಂ. ಹಾಗೂ ರ‍್ಯರ‍್ವಾಹಕ ರ‍್ಯರ‍್ಶಿ ಡಾ. ಯು ಟಿ ವಿಜಯ್ ಅವರನ್ನು ಆಳ್ವಾಸ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ರ‍್ಯಕ್ರಮದ ಕೊನೆಯಲ್ಲಿ ವಿವಿಧ ವಿಭಾಗಗಳ ವಿದ್ರ‍್ಥಿ ಪ್ರಾಜೆಕ್ಟ್ಗಳಲ್ಲಿ 28 ಉತ್ತಮ ಪ್ರ‍್ಶನಗೊಂಡ ಯೋಜನೆಗಳಿಗೆ ಹಾಗೂ 29 ಉತ್ತಮ ಸೆಮಿನಾರ್‌ಗಳಿಗೆ ಪ್ರಶಸ್ತಿ, ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರ ನೀಡಲಾಯಿತು. ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜು ಅತ್ಯುತ್ತಮ ಸಾಧನೆಗಾಗಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು. ಕೆಎಸ್‌ಸಿಎಸ್‌ಟಿ ರ‍್ಯರ‍್ವಾಹಕ ರ‍್ಯರ‍್ಶಿ ಡಾ. ಯು ಟಿ ವಿಜಯ್ ಸ್ವಾಗತಿಸಿದರು. ಆಳ್ವಾಸ್ ಇಂಜಿನಿಯರಿಆಗ್ ಕಾಲೇಜಿನ ಡಾ. ಪೀಟರ್ ರ‍್ನಾಂಡಿಸ್ ವಂದಿಸಿದರು. ಕೆಎಸ್‌ಸಿಎಸ್‌ಟಿ ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಕೆ. ಎನ್ ವೆಂಕಟೇಶ್ ಪ್ರಶಸ್ತಿ ವಿಜೇತರನ್ನು ಘೋಷಿಸಿದರು. ಆಳ್ವಾಸ್ ಪದವಿ ರ‍್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.

2 ದಿನ ನಡೆದ ವಿದ್ರ‍್ಥಿ ಯೋಜನೆಗಳ ಪ್ರ‍್ಶನದಲ್ಲಿ ಹಲವು ಯೋಜನೆಗಳು ವಿಶೇಷವಾಗಿ ಗಮನ ಸೆಳೆಯಿತು.. ವಿದ್ರ‍್ಥಿಗಳು ಆಸಕ್ತರಿಗೆ ಬಹಳ ಅಚ್ಚುಕಟ್ಟಾಗಿ ತಮ್ಮ ಯೋಜನೆಗಳನ್ನು ವಿವರಿಸಿದರು. ಅಣಬೆ ಕೃಷಿಗೂ ಬಂತು ಇಲೆಕ್ಟ್ರಾನಿಕ್ಸ್ ತಂತ್ರಜ್ಞಾನ.. !
ಇತ್ತೀಚಿನ ದಿನಗಳಲ್ಲಿ ಅಣಬೆ ಕೃಷಿಗೆ ಹೆಚ್ಚಿನ ಬೇಡಿಕೆಯಿದೆ. ಅಣಬೆ ಕೃಷಿಗೆ ಸೂಕ್ತವಾದ ವಾತಾವರಣ ಹಾಗೂ ಹವಾಮಾನದ
ಅಗತ್ಯವಿರುತ್ತದೆ. ಕರಾವಳಿ ಭಾಗಗಳಲ್ಲಿ ಅಣಬೆ ಬೆಳೆಯಲು ಬೇಕಾದ ವಾತಾವರಣ ಸ್ವಾಭಾವಿಕವಾಗಿ ಇಲ್ಲಿನ ಬಿಸಿಲು, ಮಳೆ ಹಾಗೂ ತೇವಾಂಶ ಭರಿತ ಹವಾಗುಣದಿಂದ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ತಂತ್ರಜ್ಞಾನ ಬಳಸಿ ಆಳ್ವಾಸ್
ಇಂಜಿನಿಯರಿಆಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ಪ್ರಾಧ್ಯಾಪಕ ಸುಧಾಕರ್ ಎಚ್. ಎಮ್ ರ‍್ಗರ‍್ಶನದಲ್ಲಿ ವಿದ್ರ‍್ಥಿಗಳಾದ ಶಶಾಂಕ್ ಎಸ್. ಕಶ್ಯಪ್, ಪ್ರತೀಕ್ ಕುಮಾರ್, ಸಾತ್ವಿ ಹಾಗೂ ಸುಮಾ ಹೊಸ ಮಾದರಿಯೊಂದನ್ನು ರಚಿಸಿದ್ದಾರೆ. ಈ ಮೂಲಕ ಅಣಬೆ ಕೃಷಿಗೂ ತಂತ್ರಜ್ಞಾನವನ್ನು ಪರಿಚಯಿಸಿದ್ದಾರೆ. ಈ ಯೋಜನೆಯಲ್ಲಿ ಡಿಎಚ್‌ಟಿ 11 ಸೆನ್ಸಾರ್ ಬಳಸಿ ಉಷ್ಣತೆ ಹಾಗೂ ತೇವಾಂಶವನ್ನು ನಿಯಂತ್ರಿಸಹುದು. ಜಿಎಸ್‌ಎಮ್ ಮಾಡ್ಯೂಲ್ ಅಳವಡಿಸುವ ಮೂಲಕ, ನಾವಿರುವ ಸ್ಥಳದಿಂದಲೇ ಬ್ಲಿಂಕ್ ಆ್ಯಪ್ ಮೂಲಕ ಅಣಬೆಯ ಬೆಳವಣಿಗೆಗೆ ಬೇಕಾದ ವಾತಾವರಣವನ್ನು ಅಗತ್ಯತೆಯನ್ನು ಪರಿಶೀಲಿಸಬಹುದು. ಒಟ್ಟಿನಲ್ಲಿ ವಿದ್ರ‍್ಥಿಗಳ ಈ ಯೋಜನೆಯ ಮುಖಾಂತರ ಯಾವುದೇ ಸ್ಥಳದಲ್ಲಿ ಅಣಬೆ ಕೃಷಿಯನ್ನು ನಿರಾಯಾಸವಾಗಿ ಮಾಡಬಹುದು.

ಕೃಷಿ ನೀರಾವರಿಗೂ ವಿದ್ರ‍್ಥಿಗಳ ಸೊಲ್ಯೂಷನ್ ನದಿ ನೀರಾವರಿ ಯೋಜನೆಗಳನನು ಕೇಳಿಯೇ ಇರುತ್ತೇವೆ. ಇಲ್ಲೊಂದು ವಿದ್ರ‍್ಥಿಗಳ ತಂಡ ರ‍್ನಾಟಕದ ನದಿಗಳಲ್ಲೊಂದಾದ ವಾರಾಹಿ ನದಿ ಮೂಲದ ರ‍್ಫೋಮೆಟ್ರಿಕ್ ಅನಾಲಿಸಿಸ್ ಮೂಲಕ ನದಿಯ ಪರಿಮಾಣತ್ಮಕ (ಕ್ವಾಂಟಿಟೇಟಿವ್) ಆಧ್ಯಯನ ನಡೆಸಿ, ಆ ನದಿಗೆ ಎಲ್ಲೆಲ್ಲಿ ಅಣೆಕಟ್ಟುಗಳನ್ನು ಕಟ್ಟಬಹುದು ಮತ್ತು ಸಣ್ಣ ನೀರಾವರಿ ಯೋಜನೆಗಳನ್ನು ಕೈಗೊಳ್ಳಬಹುದೆಂಬ ವೈಜ್ಞಾನಿಕ ವರದಿಯನ್ನು ಸಿದ್ಧಪಡಿಸಿದೆ. ಈ ಯೋಜನೆಯ ಭಾಗವಾಗಿ, ರಿವರ್ ರಿಫ್ಟಿಂಗ್ ತಂತ್ರಜ್ಞಾನದ ಮೂಲಕ ಸಂಡೂರು ಡ್ಯಾಮ್‌ನಿಂದ 5000 ಎಕರೆ ಕೃಷಿ ಭೂಮಿಗೆ ಬೇಸಿಗೆಯಲ್ಲೂ ನೀರು ಒದಗಿಸುವ ನಿಟ್ಟಿನಲ್ಲಿ, ಉಡುಪಿ ಜಿಲ್ಲಾ ಜಲ ಸರ‍್ಧನಾ ನಿಧಿಗೆ ಈಗಾಗಲೇ ಒಂದು ಪ್ರಸ್ತಾವನೆ ನೀಡಲಾಗಿದೆ. ಪ್ರಸ್ತಾವನೆಯು ಟೆಂಡರ್ ಹಂತದಲ್ಲಿದೆ ಎನ್ನುವುದು ವಿಶೇಷ. ಆಳ್ವಾಸ್ ಇಂಜಿನಿಯರಿಆಗ್ ಕಾಲೇಜಿನ ಡಾ. ಎಚ್. ಬಿ ಉಮೇಶ್ ಅವರ ಮಾರ್ಗದರ್ಶನದಲ್ಲಿ ಧೀರಜ್ ಸಿಂಧೆ, ಅಬ್ದುಲ್ ಮಜೀದ್, ಕೃತಿಕ್ ಹಾಗೂ ಮನೋಹರ್ ಎಂಬ ನಾಲ್ವರು ವಿದ್ರ‍್ಥಿಗಳ ತಂಡ ಈ ಯೋಜನೆಯಲ್ಲಿ ಸಕ್ರಿಯವಾಗಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

9 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago