ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ಬಿಜೆಪಿಯ ದುರ್ವರ್ತನೆಗೆ ಉತ್ತರ ನೀಡಲು ಕಾಂಗ್ರೆಸ್ ಸದಾ ಸಿದ್ಧ: ಮೋಹನ್ ಕೋಟ್ಯಾನ್

ಮುಲ್ಕಿ: ನಿನ್ನೆ ನಡೆದ ಹಳೆಯಂಗಡಿ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿಜಯೋತ್ಸವದ ಬಳಿಕ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ರವರು ಮಾಧ್ಯಮದವರ ಜೊತೆ ಕಾಂಗ್ರೆಸ್ ನಾಯಕ ಮಿಥುನ್ ರೈ ಬಗ್ಗೆ ಕೆಲವು ಸಣ್ಣತನದ ಮಾತುಗಳನ್ನು ಆಡಿದ್ದು ಇದನ್ನು ನಾವು ಖಂಡಿಸುತ್ತೇವೆ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದ್ದಾರೆ.

ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಶಾಸಕರು ಕಳೆದ ಕೆಲ ದಿನಗಳ ಹಿಂದೆ ತಮ್ಮದೇ ಕ್ಷೇತ್ರದ ಇರುವೈಲ್ ಎಂಬಲ್ಲಿ ಹಿಂಬಾಗಿಲಿನ ಮೂಲಕ ಪಂಚಾಯತ್ ಕಟ್ಟಡವನ್ನು ಉದ್ಘಾಟನೆ ಮಾಡಿದ್ದು ,ಅಲ್ಲದೆ ಕಟೀಲು ಶ್ರೀ ದೇವರ ಆಣೆ ಪ್ರಮಾಣ ಮಾಡಿ ಕೃಷಿಕರನ್ನು ಮೋಸ ಮಾಡಿ ಕೈಗಾರಿಕೆಗೆ ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ ಬಗ್ಗೆ ಜನರಿಗೆ ಅವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಇಂಥವರಿಗೆ ಮಿಥುನ ರೈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಶಾಸಕ ಕೋಟ್ಯಾನ್ ವಿರುದ್ಧ ಹರಿಹಾಯ್ದರು.
ಅವರು ಮಾತನಾಡಿ ಹಳೆಯಂಗಡಿ ಗ್ರಾ.ಪಂ.ಚುನಾವಣೆಯಲ್ಲಿ ಕೋರ್ಟ್ ಮೂಲಕ ಆದೇಶ ಹೊರಡಿಸಿ ಪಂಚಾಯತ್ ಸದಸ್ಯೆ ಜಲಜಾ ಪಾಣಾರ್ ರವರನ್ನು ಅನರ್ಹಗೊಳಿಸಿರಬಹುದು. ನಾವು ಕಾನೂನು ಹೋರಾಟ ಮಾಡುತ್ತೇವೆ. ಅದೇ ರೀತಿ ಬಿಜೆಪಿ ಬೆಂಬಲಿತ ಅಂದಿನ ಗ್ರಾ.ಪಂ ಸದಸ್ಯೆ ಸವಿತಾ ಎಂಬವರು ಅಂದಿನ ಅಧ್ಯಕ್ಷೆ ಜಲಜಾ ಪಾಣಾರ್ ರವರ ಸಹಿ ಫೋರ್ಜರಿ ಮಾಡಿ ಮೀನುಗಾರಿಕಾ ಇಲಾಖೆಯಿಂದ ಹಣ ಮಂಜೂರು ಮಾಡಿಸಿ ಭ್ರಷ್ಟಾಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಶಾಸಕರು ಯಾಕೆ ಮೌನವಾಗಿದ್ದಾರೆ? ಎಂದು ಹೇಳಿದ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಶಾಸಕರಿಗೆ ನೈತಿಕ ಹಕ್ಕು ಇಲ್ಲ ಎಂದರು.
ನಿನ್ನೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣಾ ಸಂದರ್ಭದಲ್ಲಿ ಗಲಾಟೆ ಮಾಡಿದ್ದು ಶುರು ಮಾಡದ್ದೇ ಬಿಜೆಪಿ ಕಾರ್ಯಕರ್ತರು ಎಂದು ಹೇಳಿದ ಅವರು ಬಿಜೆಪಿಯ ದಬ್ಬಾಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಯಾವುದೇ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ದುರ್ವರ್ತನೆ ತೋರಿದರೆ ಅದೇ ಜಾಗದಲ್ಲಿ ಕಾಂಗ್ರೆಸ್ ಪಕ್ಷ ಉತ್ತರ ನೀಡಲು ಸಿದ್ದ ಎಂದರು. ನಿನ್ನೆ ಕೋರ್ಟಿನ ಆದೇಶವನ್ನು ಅವರದೇ ರೀತಿಯಲ್ಲಿ ಅರ್ಥ ಮಾಡಿಕೊಂಡು ಚುನಾವಣಾ ಅಧಿಕಾರಿಗಳ ಮೂಲಕ ಮತದಾನ ನಡೆಸಿದ್ದಾರೆ ಈ ಬಗ್ಗೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕಾಂಗ್ರೆಸ್ ನಾಯಕರಾದ ಮಂಜುನಾಥ ಕಂಬಾರ ಬಾಲಚಂದ್ರ ಕಾಮತ್ ಹಳೆಯಂಗಡಿ ಗ್ರಾ.ಪಂ ಸದಸ್ಯರಾದ ಅನಿಲ್ ಪೂಜಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!