ಕರಾವಳಿ

ಹಳೆಯಂಗಡಿ : ಬಿಜೆಪಿಯ ದುರ್ವರ್ತನೆಗೆ ಉತ್ತರ ನೀಡಲು ಕಾಂಗ್ರೆಸ್ ಸದಾ ಸಿದ್ಧ: ಮೋಹನ್ ಕೋಟ್ಯಾನ್

ಮುಲ್ಕಿ: ನಿನ್ನೆ ನಡೆದ ಹಳೆಯಂಗಡಿ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿಜಯೋತ್ಸವದ ಬಳಿಕ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ರವರು ಮಾಧ್ಯಮದವರ ಜೊತೆ ಕಾಂಗ್ರೆಸ್ ನಾಯಕ ಮಿಥುನ್ ರೈ ಬಗ್ಗೆ ಕೆಲವು ಸಣ್ಣತನದ ಮಾತುಗಳನ್ನು ಆಡಿದ್ದು ಇದನ್ನು ನಾವು ಖಂಡಿಸುತ್ತೇವೆ ಎಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಹೇಳಿದ್ದಾರೆ.

ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಶಾಸಕರು ಕಳೆದ ಕೆಲ ದಿನಗಳ ಹಿಂದೆ ತಮ್ಮದೇ ಕ್ಷೇತ್ರದ ಇರುವೈಲ್ ಎಂಬಲ್ಲಿ ಹಿಂಬಾಗಿಲಿನ ಮೂಲಕ ಪಂಚಾಯತ್ ಕಟ್ಟಡವನ್ನು ಉದ್ಘಾಟನೆ ಮಾಡಿದ್ದು ,ಅಲ್ಲದೆ ಕಟೀಲು ಶ್ರೀ ದೇವರ ಆಣೆ ಪ್ರಮಾಣ ಮಾಡಿ ಕೃಷಿಕರನ್ನು ಮೋಸ ಮಾಡಿ ಕೈಗಾರಿಕೆಗೆ ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ ಬಗ್ಗೆ ಜನರಿಗೆ ಅವರ ಯೋಗ್ಯತೆ ಏನು ಎಂದು ಗೊತ್ತಾಗಿದೆ. ಇಂಥವರಿಗೆ ಮಿಥುನ ರೈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಶಾಸಕ ಕೋಟ್ಯಾನ್ ವಿರುದ್ಧ ಹರಿಹಾಯ್ದರು.
ಅವರು ಮಾತನಾಡಿ ಹಳೆಯಂಗಡಿ ಗ್ರಾ.ಪಂ.ಚುನಾವಣೆಯಲ್ಲಿ ಕೋರ್ಟ್ ಮೂಲಕ ಆದೇಶ ಹೊರಡಿಸಿ ಪಂಚಾಯತ್ ಸದಸ್ಯೆ ಜಲಜಾ ಪಾಣಾರ್ ರವರನ್ನು ಅನರ್ಹಗೊಳಿಸಿರಬಹುದು. ನಾವು ಕಾನೂನು ಹೋರಾಟ ಮಾಡುತ್ತೇವೆ. ಅದೇ ರೀತಿ ಬಿಜೆಪಿ ಬೆಂಬಲಿತ ಅಂದಿನ ಗ್ರಾ.ಪಂ ಸದಸ್ಯೆ ಸವಿತಾ ಎಂಬವರು ಅಂದಿನ ಅಧ್ಯಕ್ಷೆ ಜಲಜಾ ಪಾಣಾರ್ ರವರ ಸಹಿ ಫೋರ್ಜರಿ ಮಾಡಿ ಮೀನುಗಾರಿಕಾ ಇಲಾಖೆಯಿಂದ ಹಣ ಮಂಜೂರು ಮಾಡಿಸಿ ಭ್ರಷ್ಟಾಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಶಾಸಕರು ಯಾಕೆ ಮೌನವಾಗಿದ್ದಾರೆ? ಎಂದು ಹೇಳಿದ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಶಾಸಕರಿಗೆ ನೈತಿಕ ಹಕ್ಕು ಇಲ್ಲ ಎಂದರು.
ನಿನ್ನೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣಾ ಸಂದರ್ಭದಲ್ಲಿ ಗಲಾಟೆ ಮಾಡಿದ್ದು ಶುರು ಮಾಡದ್ದೇ ಬಿಜೆಪಿ ಕಾರ್ಯಕರ್ತರು ಎಂದು ಹೇಳಿದ ಅವರು ಬಿಜೆಪಿಯ ದಬ್ಬಾಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಯಾವುದೇ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ದುರ್ವರ್ತನೆ ತೋರಿದರೆ ಅದೇ ಜಾಗದಲ್ಲಿ ಕಾಂಗ್ರೆಸ್ ಪಕ್ಷ ಉತ್ತರ ನೀಡಲು ಸಿದ್ದ ಎಂದರು. ನಿನ್ನೆ ಕೋರ್ಟಿನ ಆದೇಶವನ್ನು ಅವರದೇ ರೀತಿಯಲ್ಲಿ ಅರ್ಥ ಮಾಡಿಕೊಂಡು ಚುನಾವಣಾ ಅಧಿಕಾರಿಗಳ ಮೂಲಕ ಮತದಾನ ನಡೆಸಿದ್ದಾರೆ ಈ ಬಗ್ಗೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕಾಂಗ್ರೆಸ್ ನಾಯಕರಾದ ಮಂಜುನಾಥ ಕಂಬಾರ ಬಾಲಚಂದ್ರ ಕಾಮತ್ ಹಳೆಯಂಗಡಿ ಗ್ರಾ.ಪಂ ಸದಸ್ಯರಾದ ಅನಿಲ್ ಪೂಜಾರಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

1 hour ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

1 hour ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

2 hours ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

2 hours ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

2 hours ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

6 hours ago