ಉಜಿರೆಯ ಅಜಿತ್ ನಗರ ಕಲ್ಲೆಯ ಫೆಲಿಕ್ಸ್ ರೊಡ್ರಿಗಸ್ ಅವರ ಮನೆಯಲ್ಲಿ ಹಾಡು ಹಗಲೇ ಕಳ್ಳತನ ನಡೆದ ಘಟನೆ ನಡೆದಿದೆ. ಫೆಲಿಕ್ಸ್ ಅವರು ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಉಜಿರೆ ಅನುಗ್ರಹ ಶಾಲೆಯಲ್ಲಿ ಹೆಲ್ಪರ್ ಕೆಲಸಕ್ಕೆ ಹೋಗುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳು ಕಾಲೇಜಿಗೆ ಹೋಗುತ್ತಿದ್ದು ಯಾರು ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಗಳು ಶಾಲೆಯಿಂದ ಮನೆಗೆ ಬಂದ ಸಂದರ್ಭ ಕಳ್ಳತನ ಬೆಳಕಿಗೆ ಬಂದಿದೆ. ಹಿಂದಿನ ಬಾಗಿಲು ನಿಂದ ಒಳಗೆ ಹೋಗಿ ಮುಂದಿನ ಬಾಗಿಲಿಗೆ ಚಿಲಕ ಹಾಕಲಾಗಿದ್ದು, ಕಪಾಟಿನಲ್ಲಿದ್ದ ಕರಿಮಣಿ ಸರ,4 ಬಳೆ, 8 ಜೋಡಿ ಕಿವಿಯೋಲೆ, 3ಪವನ್ ನೆಕ್ಲಸ್, 3ಚೈನ್, 4 ಉಂಗುರ, 1 ಬ್ರೆಸ್ಲಾಟ್, ನಗದು 10 ಸಾವಿರ, ಒಟ್ಟು 15 ಪಾವನ್ ಚಿನ್ನವನ್ನು ದರೋಡೆಕೋರರರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಎಸ್.ಐ ಧನರಾಜ್ ಆಗಮಿಸಿ ಪರಿಶೀಲನೆ ನಡೆಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…