ಜನ ಮನದ ನಾಡಿ ಮಿಡಿತ

Advertisement

ಮುಂಗುಸಿಯ ಪ್ರಾಣ ಉಳಿಸಲು ಹೋಗಿ ರಿಕ್ಷಾ ಪಲ್ಟಿ; ಚಾಲಕನಿಗೆ ಗಾಯ

ವಿಟ್ಲ: ರಸ್ತೆಗೆ ಅಡ್ಡ ಬಂದ ಮುಂಗುಸಿಯನ್ನೂ ಉಳಿಸಲು ಹೋಗಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಆಟೋ ಚಾಲಕ ಮಂಗಲಪದವು ನಿವಾಸಿ ಇಸ್ಮಾಯಿಲ್ (53) ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ವಿಟ್ಲದಿಂದ ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಮತ್ತೆ ವಿಟ್ಲಕ್ಕೆ ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸಮೀಪ ಮುಂಗುಸಿಯೊಂದು ಅಡ್ಡಬಂದಿದೆ. ವೇಗವಾಗಿ ಚಲಿಸುತ್ತಿದ್ದ ರಿಕ್ಷಾ ಚಾಲಕ ಮುಂಗುಸಿಯ ಪ್ರಾಣ ಉಳಿಸಲು ಹಠಾತ್ ಬ್ರೇಕ್ ಹಾಕಿದ್ದಾರೆ. ತಕ್ಷಣ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿದೆ.

ಘಟನೆಯಲ್ಲಿ ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದು, ಆಟೋ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!