ವಿಟ್ಲ: ರಸ್ತೆಗೆ ಅಡ್ಡ ಬಂದ ಮುಂಗುಸಿಯನ್ನೂ ಉಳಿಸಲು ಹೋಗಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಆಟೋ ಚಾಲಕ ಮಂಗಲಪದವು ನಿವಾಸಿ ಇಸ್ಮಾಯಿಲ್ (53) ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ವಿಟ್ಲದಿಂದ ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಮತ್ತೆ ವಿಟ್ಲಕ್ಕೆ ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸಮೀಪ ಮುಂಗುಸಿಯೊಂದು ಅಡ್ಡಬಂದಿದೆ. ವೇಗವಾಗಿ ಚಲಿಸುತ್ತಿದ್ದ ರಿಕ್ಷಾ ಚಾಲಕ ಮುಂಗುಸಿಯ ಪ್ರಾಣ ಉಳಿಸಲು ಹಠಾತ್ ಬ್ರೇಕ್ ಹಾಕಿದ್ದಾರೆ. ತಕ್ಷಣ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಅಪ್ಪಳಿಸಿದೆ.
ಘಟನೆಯಲ್ಲಿ ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದು, ಆಟೋ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…