ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.
ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.
ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…