ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.
ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.
ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…