ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!