ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!