ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!