ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.
ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.
ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.
ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…