ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಲ್ಕಿ ಕೆನರಾ ಬ್ಯಾಂಕ್ ಬಳಿ ನಡೆಯಿತು. ಬಳಿಕ ಸಂಘಟನೆ ಬೆಳೆದು ಬಂದ 9ನೇ ವರ್ಷದ ವಾರ್ಷಿಕೋತ್ಸವ ಪುನರೂರು ಟೂರಿಸ್ಟ್ ಹೋಂ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ತುಳು ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ ಎಂಟನೇ ಪರಿಛೇದದಲ್ಲಿ ಸೇರಿಸಲು ಪ್ರಬಲ ಹಕ್ಕೊತ್ತಾಯ ನಡೆಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ತುಳುನಾಡು ಸಂಸ್ಥೆಯ ವಿಶು ಶ್ರೀಕೇರ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಆಕಾಶ್ ರಾಜ್ ಜೈನ್, ಟೈಮ್ಸ್ ಆಫ್ ಕುಡ್ಲ ತುಳುಪತ್ರಿಕೆ ಸಂಪಾದಕ ಎಸ್ ಆರ್ ಬಂಡಿಮಾರ್, ವಕೀಲರಾದ ಗಿರೀಶ್ ಶೆಟ್ಟಿ ಶಿಬರೂರು, ಮುಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಜೈ ತುಳುನಾಡು ಸಂಘಟನೆಯ ಉಪಾಧ್ಯಕ್ಷ ಉದಯ ಪೂಂಜ, ಕಿರಣ್ ತುಳುವ, ಪೂರ್ಣಿಮಾ ಕಿರಣ್ ಮತ್ತಿತರರು ಉಪಸ್ಥಿತರಿದ್ದರು ಪೂರ್ಣಿಮಾ ಬಂಟ್ವಾಳ ನಿರೂಪಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…