ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಕ್ಷಲಹರಿ ಕಿನ್ನಿಗೋಳಿಯ ಸದಸ್ಸರೂ, ಕಲ್ಲಮುಂಡ್ಕೂರಿನ ನಿವೃತ್ತ ಪ್ರಾಧ್ಯಾಪಕರಾದ ವಸಂತ ದೇವಾಡಿಗ ಪಂಜ ಕರೆಕೊಟ್ಟರು.
ಅವರು ದೇವಾಡಿಗ ಸಮಾಜ ಸಮಾಜ ಸೇವಾ ಸಂಘ (ರಿ), ಪಾವಂಜೆಯ ಆಶ್ರಯದಲ್ಲಿ, ದೇವಾಡಿಗ ಯುವ ವೇದಿಕೆ ಪಾವಂಜೆ ಮತ್ತು ದೇವಾಡಿಗ ಸೇವಾ ಟ್ರಸ್ಟ್ (ರಿ) ಪಾವಂಜೆ ಇವರ ಸಹಯೋಗದಲ್ಲಿ, ದೇವಾಡಿಗ ಮಹಿಳಾ ವೇದಿಕೆ ಪಾವಂಜೆ ಇವರ ನೇತೃತ್ವದಲ್ಲಿ ನಡೆದ ಆಟಿಡೊಂಜಿ ಐತಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಬೆನೆಟ್ ಜಿ.ಅಮ್ಮಣ್ಣ ಆಟಿ ಆಚರಣೆಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಧಾಕರ ಆರ್.ಅಮೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ದೇವಾಡಿಗ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಶುಭ್ರತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಟಿಯ ಖಾದ್ಯಗಳನ್ನು ತಯಾರಿಸಿದ ಮಾತೆಯರನ್ನು ಅಭಿನಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…