ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯಕ್ಷಲಹರಿ ಕಿನ್ನಿಗೋಳಿಯ ಸದಸ್ಸರೂ, ಕಲ್ಲಮುಂಡ್ಕೂರಿನ ನಿವೃತ್ತ ಪ್ರಾಧ್ಯಾಪಕರಾದ ವಸಂತ ದೇವಾಡಿಗ ಪಂಜ ಕರೆಕೊಟ್ಟರು.
ಅವರು ದೇವಾಡಿಗ ಸಮಾಜ ಸಮಾಜ ಸೇವಾ ಸಂಘ (ರಿ), ಪಾವಂಜೆಯ ಆಶ್ರಯದಲ್ಲಿ, ದೇವಾಡಿಗ ಯುವ ವೇದಿಕೆ ಪಾವಂಜೆ ಮತ್ತು ದೇವಾಡಿಗ ಸೇವಾ ಟ್ರಸ್ಟ್ (ರಿ) ಪಾವಂಜೆ ಇವರ ಸಹಯೋಗದಲ್ಲಿ, ದೇವಾಡಿಗ ಮಹಿಳಾ ವೇದಿಕೆ ಪಾವಂಜೆ ಇವರ ನೇತೃತ್ವದಲ್ಲಿ ನಡೆದ ಆಟಿಡೊಂಜಿ ಐತಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಬೆನೆಟ್ ಜಿ.ಅಮ್ಮಣ್ಣ ಆಟಿ ಆಚರಣೆಗಳು ಮತ್ತು ಗಿಡಮೂಲಿಕೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಸುಧಾಕರ ಆರ್.ಅಮೀನ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ದೇವಾಡಿಗ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಶುಭ್ರತ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಟಿಯ ಖಾದ್ಯಗಳನ್ನು ತಯಾರಿಸಿದ ಮಾತೆಯರನ್ನು ಅಭಿನಂದಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…