ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಸಾಮಾಜಿಕ ಜಾಲತಾಣದಲ್ಲಿ ವೈವಿಧ್ಯಮಯ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ರು.
ಇದೀಗ ತಮ್ಮ ರಾಜ್ಯದಲ್ಲಿನ ಹಳ್ಳಿಗಳಲ್ಲಿ ಜನರು ಬಿದಿರನ್ನು ಬಳಸಿ ಪರಿಸರ ಸ್ನೇಹಿ ‘ವಾಶ್ ಬೇಸಿನ್’ ತಯಾರಿಸಿರುವ ಕುರಿತು ವಿಡಿಯೋವನ್ನು ಹಂಚಿಕೊ0ಡಿದ್ದಾರೆ.
ಪರಿಸರದಲ್ಲಿ ದೊರಕುವ ವಸ್ತುಗಳನ್ನೇ ಬಳಸಿಕೊಂಡು ತುಂಬಾ ಕೌಶಲ್ಯಯುತವಾಗಿ ತಯಾರಿಸಿರುವ ಈ ವಾಶ್ ಬೇಸಿನ್ ಬಗ್ಗೆ ಇಮ್ನಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
“ಇದು ಬಿದಿರನ್ನು ಬಳಸಿ ಕಂಡು ಹಿಡಿದಿರುವ ನೂತನ ವಾಶ್ ಬೇಸಿನ್, ಶೇ.100ರಷ್ಟು ನೈಸರ್ಗಿಕವಾಗಿದೆ. ಇದರ ಬಳಕೆಯಿಂದ ಪರಿಹಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ನಾಗಾಲ್ಯಾಂಡ್ ಜನರು ತಮ್ಮ ಹಳ್ಳಿಗಳಲ್ಲಿ ಇಂತಹ ಪರಿಸರ ಸ್ನೇಹಿ ವಾಶ್ ಬೇಸಿನ್ ಗಳನ್ನು ತಯಾರಿಸಿ ಬಳಸುತ್ತಿದ್ದಾರೆ. ಪರ್ವತ ಪ್ರದೇಶದಿಂದ ಹರಿದು ಬರುವ ನೀರನ್ನು ಬಿದಿರಿನ ಮೂಲಕ ಹಾಯಿಸಿ ಅದಕ್ಕೆ ರಂಧ್ರಗಳನ್ನು ಕೊರೆದು ತಮಗೆ ಅಗತ್ಯವಿದ್ದಾಗ ರಂಧ್ರಕ್ಕೆ ಸಿಕ್ಕಿಸಿದ ಮರದ ತಂಡುಗಳನ್ನು ಹೊರತೆಗೆದು ಕೈ, ಕಾಲುಗಳನ್ನು ತೊಳೆದುಕೊಳ್ಳಬಹುದಾಗಿದೆ. ನಂತರ ಪುನಃ ಮರದ ಚೂಪಾದ ತುಂಡನ್ನು ರಂಧ್ರವನ್ನು ಮುಚ್ಚುತ್ತಾರೆ” ಎಂಬುದಾಗಿ ಇಮ್ನಾ ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…