ಕರಾವಳಿ

ಆನಂದ ಆಳ್ವ 106ನೇ ಹುಟ್ಟುಹಬ್ಬ ಆಚರಣೆ‘ಬದುಕಿದರೆ ಸಾಲದು, ಬದುಕು ಸಾರ್ಥಕತೆ ಕಾಣಬೇಕು’

ವಿದ್ಯಾಗಿರಿ: ಮಿಜಾರುಗುತ್ತು ಆನಂದ ಆಳ್ವ ಅವರ ೧೦೬ನೇ ಜನ್ಮದಿನವನ್ನು ಆಳ್ವಾಸ್ ಕಾಲೇಜಿನ ವಿ.ಎಸ್.
ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಶ್ರದ್ಧೆ- ಭಕ್ತಿ, ಸಂಭ್ರಮದಿಆದ ಆಚರಿಸಲಾಯಿತು. ಆನಂದ ಆಳ್ವರಿಗೆ ಬೆಳ್ಳಿ ಲೋಟದಲ್ಲಿ ಹಾಲು ನೀಡಿ, ಹೂವಿನ ಹಾರ, ಪನ್ನೀರು, ಹೂವಿನ ದಳ, ತಿಲಕದ ಗೌರವ ನೀಡಿ, ಆರತಿ ಬೆಳಗಿ, ನೂರ ಆರು ದೀಪ ಹಚ್ಚಿ ಹುಟ್ಟುಹಬ್ಬ ಆಚರಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ. ಮೋಹನ ಆಳ್ವ ಮಾತನಾಡಿ, ‘ಕೇವಲ ಬದುಕಿದರೆ ಸಾಲದು, ಆ ಬದುಕು ಸಾರ್ಥಕವಾಗಿರಬೇಕು. ಅದಕ್ಕೆ ತಂದೆ ಆನಂದ ಆಳ್ವರ ಬದುಕು ನಿದರ್ಶನ. ಅವರ ಹೋರಾಟ, ಜೀವನ ಕ್ರಮ ನಮಗೆಲ್ಲ ಸ್ಫೂರ್ತಿ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ‘ಮಕ್ಕಳು ತಂದೆತಾಯಿ ಹುಟ್ಟು ಹಬ್ಬವನ್ನು ಆಚರಿಸುವುದು ಯೋಗ ಹಾಗೂ ಭಾಗ್ಯ’ ಎಂದರು. ‘೧೦೬ ವರ್ಷ ಕುಟುಂಬದ ಯಜಮಾನನಾಗಿ, ಊರಿಗೆ ನಾಯಕನಾಗಿ ಬದುಕಿದವರು ಆನಂದ ಆಳ್ವರು. ಕಂಬಳ, ನಾಗಮಂಡಲ, ಕೌಟುಂಬಿಕ ಅಂತಃಕಲಹ ಹಾಗೂ ಊರಿನ ಸಮಸ್ಯೆ ಬಗ್ಗೆ ನ್ಯಾಯೋಚಿತ ಪರಿಹಾರ ನೀಡುತಿದ್ದವರು ಆನಂದ ಆಳ್ವರು ಎಂದರು.

ತಂದೆ-ತಾಯಿಯ ಸಮಾಜ ಸೇವೆಯೇ ಮಕ್ಕಳಿಗೆ ಆಸ್ತಿಯಾಗುತ್ತದೆ. ಡಾ.ಮೋಹನ ಆಳ್ವರ ಸಾಧನೆಯ ಹಿಂದೆ ಅವರ ತಂದೆ-ತಾಯಿಯ ತ್ಯಾಗ ಇದೆ ಎಂದರು. ದೇವರನ್ನು ಪೂಜಿಸದಿದ್ದರೂ, ಪೋಷಕರ ಪಾಲನೆ ಮಾಡಿ. ಹಿರಿಯರು ಮಕ್ಕಳ ಆಶ್ರಯದಲ್ಲಿ ಇರಬೇಕು. ಆಶ್ರಮದಲ್ಲಿ ಅಲ್ಲ ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ,
‘ಆನಂದ ಆಳ್ವರು ಮುಂದಾಳತ್ವ ವಹಿಸಿದ್ದ ಕಂಬಳಕ್ಕೆ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಬಂದಿದ್ದರು. ಅಡಿಕೆ ತೋಟದ ಮೂಲಕ ಕೃಷಿಕರು ಬದುಕು ಕಂಡಿದ್ದರೆ, ಆನಂದ ಆಳ್ವರ ಸಾಧನೆಯೇ ಮಾರ್ಗದರ್ಶಿ. ಅವರು ಮಹಾವೀರ ಕಾಲೇಜಿನ ಟ್ರಸ್ಟಿ ಆಗಿದ್ದರು ಎಂದರು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಕುಲಾಧಿಪತಿ ಎನ್ ವಿನಯ ಹೆಗ್ಡೆ ಮಾತನಾಡಿ, ಮೋಹನ ಆಳ್ವರ
ಸಾಧನೆಗೆ ಅವರ ತಂದೆ ಸಾಧನೆ ಪ್ರೇರಣೆ. ಅವರು 190 ವರ್ಷ ಬಾಳಲಿ ಎಂದರು. ಕೂಡುಕುಟುಆಬದಲ್ಲಿ ಪ್ರೀತಿ ಹಾಗೂ ಆಶೀರ್ವಾದ ಇರುತ್ತದೆ. ಮೋಹನ ಆಳ್ವರಿಗೆ ಅವರ ಶಿಕ್ಷಣ ಸಂಸ್ಥೆಯ ಮಕ್ಕಳ ಜೊತೆ ಅನ್ಯೋನ್ಯ ಸಂಬಂಧ ಇದೆ. ಅದಕ್ಕಾಗಿಯೇ ಸಿ.ಎ.ಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಜನರ ಪ್ರೀತಿಯೇ ಎಲ್ಲದಕ್ಕಿಂತಲೂ ಶ್ರೇಷ್ಠ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಡಾ. ವಿನಯ್ ಆಳ್ವ ಹಾಗೂ ಆನಂದ ಆಳ್ವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸೇರಿದಂತೆ ಕುಟುಂಬ ವರ್ಗದವರು ಪಾಲ್ಗೊಂಡರು. ಊರ ನಾಗರೀಕರು, ಅಭಿಮಾನಿಗಳು, ಸಂಸ್ಥೆಯ ಉದ್ಯೋಗಿಗಳು ಶತಾಯುಷಿ ಆನಂದ ಆಳ್ವರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಚೌಟ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ನಾರಾಯಣ್ ಪಿ ಎಂ, ಜಯಶ್ರೀ ಅಮರನಾಥ್ ಶೆಟ್ಟಿ, ಮೀನಾಕ್ಷಿ ಆಳ್ವ, ಬಾಲಕೃಷ್ಣ ಶೆಟ್ಟಿ, ಪ್ರೇಮಲತಾ ವಿ ಶೆಟ್ಟಿ, ಅಮಿತಾ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ನಿಖಾಯದ ಡೀನ್ ವೇಣುಗೋಪಾಲ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

6 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

6 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

6 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

6 days ago