ವಿದ್ಯಾಗಿರಿ: ಮಿಜಾರುಗುತ್ತು ಆನಂದ ಆಳ್ವ ಅವರ ೧೦೬ನೇ ಜನ್ಮದಿನವನ್ನು ಆಳ್ವಾಸ್ ಕಾಲೇಜಿನ ವಿ.ಎಸ್.
ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಶ್ರದ್ಧೆ- ಭಕ್ತಿ, ಸಂಭ್ರಮದಿಆದ ಆಚರಿಸಲಾಯಿತು. ಆನಂದ ಆಳ್ವರಿಗೆ ಬೆಳ್ಳಿ ಲೋಟದಲ್ಲಿ ಹಾಲು ನೀಡಿ, ಹೂವಿನ ಹಾರ, ಪನ್ನೀರು, ಹೂವಿನ ದಳ, ತಿಲಕದ ಗೌರವ ನೀಡಿ, ಆರತಿ ಬೆಳಗಿ, ನೂರ ಆರು ದೀಪ ಹಚ್ಚಿ ಹುಟ್ಟುಹಬ್ಬ ಆಚರಿಸಲಾಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ. ಮೋಹನ ಆಳ್ವ ಮಾತನಾಡಿ, ‘ಕೇವಲ ಬದುಕಿದರೆ ಸಾಲದು, ಆ ಬದುಕು ಸಾರ್ಥಕವಾಗಿರಬೇಕು. ಅದಕ್ಕೆ ತಂದೆ ಆನಂದ ಆಳ್ವರ ಬದುಕು ನಿದರ್ಶನ. ಅವರ ಹೋರಾಟ, ಜೀವನ ಕ್ರಮ ನಮಗೆಲ್ಲ ಸ್ಫೂರ್ತಿ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ‘ಮಕ್ಕಳು ತಂದೆತಾಯಿ ಹುಟ್ಟು ಹಬ್ಬವನ್ನು ಆಚರಿಸುವುದು ಯೋಗ ಹಾಗೂ ಭಾಗ್ಯ’ ಎಂದರು. ‘೧೦೬ ವರ್ಷ ಕುಟುಂಬದ ಯಜಮಾನನಾಗಿ, ಊರಿಗೆ ನಾಯಕನಾಗಿ ಬದುಕಿದವರು ಆನಂದ ಆಳ್ವರು. ಕಂಬಳ, ನಾಗಮಂಡಲ, ಕೌಟುಂಬಿಕ ಅಂತಃಕಲಹ ಹಾಗೂ ಊರಿನ ಸಮಸ್ಯೆ ಬಗ್ಗೆ ನ್ಯಾಯೋಚಿತ ಪರಿಹಾರ ನೀಡುತಿದ್ದವರು ಆನಂದ ಆಳ್ವರು ಎಂದರು.
ತಂದೆ-ತಾಯಿಯ ಸಮಾಜ ಸೇವೆಯೇ ಮಕ್ಕಳಿಗೆ ಆಸ್ತಿಯಾಗುತ್ತದೆ. ಡಾ.ಮೋಹನ ಆಳ್ವರ ಸಾಧನೆಯ ಹಿಂದೆ ಅವರ ತಂದೆ-ತಾಯಿಯ ತ್ಯಾಗ ಇದೆ ಎಂದರು. ದೇವರನ್ನು ಪೂಜಿಸದಿದ್ದರೂ, ಪೋಷಕರ ಪಾಲನೆ ಮಾಡಿ. ಹಿರಿಯರು ಮಕ್ಕಳ ಆಶ್ರಯದಲ್ಲಿ ಇರಬೇಕು. ಆಶ್ರಮದಲ್ಲಿ ಅಲ್ಲ ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ,
‘ಆನಂದ ಆಳ್ವರು ಮುಂದಾಳತ್ವ ವಹಿಸಿದ್ದ ಕಂಬಳಕ್ಕೆ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಬಂದಿದ್ದರು. ಅಡಿಕೆ ತೋಟದ ಮೂಲಕ ಕೃಷಿಕರು ಬದುಕು ಕಂಡಿದ್ದರೆ, ಆನಂದ ಆಳ್ವರ ಸಾಧನೆಯೇ ಮಾರ್ಗದರ್ಶಿ. ಅವರು ಮಹಾವೀರ ಕಾಲೇಜಿನ ಟ್ರಸ್ಟಿ ಆಗಿದ್ದರು ಎಂದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಕುಲಾಧಿಪತಿ ಎನ್ ವಿನಯ ಹೆಗ್ಡೆ ಮಾತನಾಡಿ, ಮೋಹನ ಆಳ್ವರ
ಸಾಧನೆಗೆ ಅವರ ತಂದೆ ಸಾಧನೆ ಪ್ರೇರಣೆ. ಅವರು 190 ವರ್ಷ ಬಾಳಲಿ ಎಂದರು. ಕೂಡುಕುಟುಆಬದಲ್ಲಿ ಪ್ರೀತಿ ಹಾಗೂ ಆಶೀರ್ವಾದ ಇರುತ್ತದೆ. ಮೋಹನ ಆಳ್ವರಿಗೆ ಅವರ ಶಿಕ್ಷಣ ಸಂಸ್ಥೆಯ ಮಕ್ಕಳ ಜೊತೆ ಅನ್ಯೋನ್ಯ ಸಂಬಂಧ ಇದೆ. ಅದಕ್ಕಾಗಿಯೇ ಸಿ.ಎ.ಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಜನರ ಪ್ರೀತಿಯೇ ಎಲ್ಲದಕ್ಕಿಂತಲೂ ಶ್ರೇಷ್ಠ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಡಾ. ವಿನಯ್ ಆಳ್ವ ಹಾಗೂ ಆನಂದ ಆಳ್ವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸೇರಿದಂತೆ ಕುಟುಂಬ ವರ್ಗದವರು ಪಾಲ್ಗೊಂಡರು. ಊರ ನಾಗರೀಕರು, ಅಭಿಮಾನಿಗಳು, ಸಂಸ್ಥೆಯ ಉದ್ಯೋಗಿಗಳು ಶತಾಯುಷಿ ಆನಂದ ಆಳ್ವರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಚೌಟ ಅರಮನೆಯ ಕುಲದೀಪ್ ಎಂ, ಉದ್ಯಮಿ ಶ್ರೀಪತಿ ಭಟ್, ನಾರಾಯಣ್ ಪಿ ಎಂ, ಜಯಶ್ರೀ ಅಮರನಾಥ್ ಶೆಟ್ಟಿ, ಮೀನಾಕ್ಷಿ ಆಳ್ವ, ಬಾಲಕೃಷ್ಣ ಶೆಟ್ಟಿ, ಪ್ರೇಮಲತಾ ವಿ ಶೆಟ್ಟಿ, ಅಮಿತಾ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ನಿಖಾಯದ ಡೀನ್ ವೇಣುಗೋಪಾಲ ನಿರೂಪಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…