ಜನ ಮನದ ನಾಡಿ ಮಿಡಿತ

Advertisement

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರ ಕೈಯಲ್ಲಿ ‘ದೊಣ್ಣೆ ಕಡ್ಡಾಯ’

ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.


ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್‍ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.

ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್‍ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!