ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.
ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…