ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.
ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…