ಜನ ಮನದ ನಾಡಿ ಮಿಡಿತ

Advertisement

ಚಂದ್ರನ ಅಂಗಳಕ್ಕೆ ಚಂದ್ರಯಾನ-3 ತಲುಪಲು ಕ್ಷಣಗಣನೆ…!

ಚಂದ್ರನ ಅಂಗಳದಲ್ಲಿ ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-3 ಲ್ಯಾಂಡ್ ಆಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.
ಇಸ್ರೋ ತನ್ನ ಚಂದ್ರಯಾನ-3 ಸ್ಯಾಟಲೈಟ್ ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಮಾಡಲು ಮುಂದಾಗಿದೆ. ಪ್ರತಿಯೊಂದು ಹಂತದಲ್ಲೂ ಯಶಸ್ವಿಯಾಗಿರುವ ಇಸ್ರೋ ಇವತ್ತು ಮತ್ತೊಂದು ಮೈಲಿಗಲ್ಲು ಸಾಧಿಸಿದೆ.


ಚಂದ್ರಯಾನ-3 ಇವತ್ತು ಯಶಸ್ವಿಯಾಗಿ ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ಇಸ್ರೋ ಲೇಟೆಸ್ಟ್ ಮಾಹಿತಿಯನ್ನು ಇಸ್ರೋದ ಮಾಹಿತಿ ಪ್ರಕಾರ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರಯಾನ-3 ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಅಂದ್ರೆ ಇಸ್ರೋದ ಚಂದ್ರಯಾನ-3 ಚಂದ್ರನಿಗೆ ಇನ್ನು ಕೇವಲ 153 km x 163 km ಅಂತರದಲ್ಲಿದೆ. ನಾಳೆ ಅಂದ್ರೆ ಆಗಸ್ಟ್ 17ರಂದು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಯಲಿದೆ. ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸುವ ಮುಹೂರ್ತವೂ ನಿಗದಿಯಾಗಿದೆ.


ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನಾಳೆ ಲ್ಯಾಂಡಲ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸಲಾಗುತ್ತಿದೆ. ಎಲ್ಲಾ ಅಂದುಕೊAಡತೆ ಆದರೆ ಇದೇ ಆಗಸ್ಟ್ 23ರಂದು ಚಂದ್ರಯಾನ-3 ಸಾಫ್ಟ್ ಲ್ಯಾಂಡಿAಗ್ ಆಗಲಿದೆ. ಅಂದು ಚಂದ್ರನ ಮೇಲ್ಮಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜನೆ ತಯಾರಾಗಿದೆ.

ಆಗಸ್ಟ್ 23ರಂದು ಚಂದ್ರಯಾನ-3ನಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಿದ್ರೆ ಇಸ್ರೋ ಹೊಸದೊಂದು ಇತಿಹಾಸ ಬರೆಯಲಿದೆ. ಅಮೆರಿಕಾ, ರಷ್ಯಾ, ಚೀನಾದ ಈ ಸಾಧನೆ ಮಾಡಿದ 4ನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!