ರಾಷ್ಟ್ರ

ಚಂದ್ರನ ಅಂಗಳಕ್ಕೆ ಚಂದ್ರಯಾನ-3 ತಲುಪಲು ಕ್ಷಣಗಣನೆ…!

ಚಂದ್ರನ ಅಂಗಳದಲ್ಲಿ ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-3 ಲ್ಯಾಂಡ್ ಆಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.
ಇಸ್ರೋ ತನ್ನ ಚಂದ್ರಯಾನ-3 ಸ್ಯಾಟಲೈಟ್ ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಮಾಡಲು ಮುಂದಾಗಿದೆ. ಪ್ರತಿಯೊಂದು ಹಂತದಲ್ಲೂ ಯಶಸ್ವಿಯಾಗಿರುವ ಇಸ್ರೋ ಇವತ್ತು ಮತ್ತೊಂದು ಮೈಲಿಗಲ್ಲು ಸಾಧಿಸಿದೆ.


ಚಂದ್ರಯಾನ-3 ಇವತ್ತು ಯಶಸ್ವಿಯಾಗಿ ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ಇಸ್ರೋ ಲೇಟೆಸ್ಟ್ ಮಾಹಿತಿಯನ್ನು ಇಸ್ರೋದ ಮಾಹಿತಿ ಪ್ರಕಾರ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರಯಾನ-3 ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಅಂದ್ರೆ ಇಸ್ರೋದ ಚಂದ್ರಯಾನ-3 ಚಂದ್ರನಿಗೆ ಇನ್ನು ಕೇವಲ 153 km x 163 km ಅಂತರದಲ್ಲಿದೆ. ನಾಳೆ ಅಂದ್ರೆ ಆಗಸ್ಟ್ 17ರಂದು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಯಲಿದೆ. ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸುವ ಮುಹೂರ್ತವೂ ನಿಗದಿಯಾಗಿದೆ.


ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನಾಳೆ ಲ್ಯಾಂಡಲ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸಲಾಗುತ್ತಿದೆ. ಎಲ್ಲಾ ಅಂದುಕೊAಡತೆ ಆದರೆ ಇದೇ ಆಗಸ್ಟ್ 23ರಂದು ಚಂದ್ರಯಾನ-3 ಸಾಫ್ಟ್ ಲ್ಯಾಂಡಿAಗ್ ಆಗಲಿದೆ. ಅಂದು ಚಂದ್ರನ ಮೇಲ್ಮಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜನೆ ತಯಾರಾಗಿದೆ.

ಆಗಸ್ಟ್ 23ರಂದು ಚಂದ್ರಯಾನ-3ನಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಿದ್ರೆ ಇಸ್ರೋ ಹೊಸದೊಂದು ಇತಿಹಾಸ ಬರೆಯಲಿದೆ. ಅಮೆರಿಕಾ, ರಷ್ಯಾ, ಚೀನಾದ ಈ ಸಾಧನೆ ಮಾಡಿದ 4ನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

3 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

3 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

8 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

9 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

9 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

9 hours ago