ಸದಾ ನಗುಮುಖದಿಂದ ಎಲ್ಲರ ನೋವಿಗೂ ಸ್ಪಂದಿಸೋ ವ್ಯಕ್ತಿತ್ವ ಹೊಂದಿರುವ ಸರಳ ಜೀವಿ. ರಿಯಾಲಿಟಿ ಶೋಗಳಲ್ಲಿ ಲವಲವಿಕೆಯಿಂದ ಇರುತ್ತಿದ್ದ ರಾಘು ಜೀವನದ ನಗುವೆ ಮಾಯವಾಗಿದೆ.
ಇಂತಹ ಸಂದರ್ಭದಲ್ಲಿ ಮತ್ತೆ ರಾಘು ರಿಯಾಲಿಟಿ ಶೋಗೆ ಬರುತ್ತಾರಾ? ಅವರ ಆ ಪ್ರೀತಿ ತುಂಬಿದ ಮಾತುಗಳನ್ನ ಕೇಳಬಹುದಾ ಅನ್ನೋದು ಎಷ್ಟೋ ಅಭಿಮಾನಿಗಳಲ್ಲಿ ಪ್ರಶ್ನೆಯೊಂದು ಮೂಡಿದೆ. ಜೀ ಕನ್ನಡದ ಡ್ರಾಮಾ ಜೂನಿಯರ್ಸ್, ಡಿಕೆಡಿ, ಸೂಪರ್ ಕ್ವೀನ್, ಕಲರ್ಸ್ನ ಡ್ಯಾನ್ಸಿಂಗ್ ಚಾಂಪಿಯನ್ ಸೇರಿದಂತೆ ಹಲವು ಶೋಗಳಲ್ಲಿ ಜಡ್ಜ್ ಸೀಟ್ನ್ನು ನಟ ವಿಜಯ್ ರಾಘವೇಂದ್ರ ಅಲಂಕರಿಸಿದ್ದಾರೆ.
ಸದ್ಯ ಡಿಕೆಡಿಗೆ ಮತ್ತೆ ಕಮ್ ಬ್ಯಾಕ್ ಮಾಡಿದ್ದ ರಾಘು, ತುಂಬಾನೇ ಆ್ಯಕ್ಟಿವ್ ಆಗಿದ್ದರು. ಅವರ ಈ ಎನರ್ಜಿ ಹಿಂದಿನ ಶಕ್ತಿ ಪ್ರೀತಿಯ ಮಡದಿ ಸ್ಪಂದನಾ ಅವರು 37ನೇ ವಯಸ್ಸಿಗೆ ಹೃದಯಾಘಾತದಿಂದ ಆಗಸ್ಟ್ 7ರಂದು ವಿಧಿವಶರಾಗಿದ್ದಾರೆ. ಈಗ ಆ ಶಕ್ತಿಯನ್ನ ಕಳೆದುಕೊಂಡ ನೋವಿನಲ್ಲಿರುವ ನಟ ವಿಜಯ್ ರಾಘವೇಂದ್ರ ಅವರು ಸದ್ಯಕ್ಕೆ ಡಿಕೆಡಿಯಿಂದ ದೂರ ಉಳಿಯೋ ಚಾನ್ಸ್ ಇದೆ. ಹೌದು, ಅಪ್ಪು ಮಾಮನ ಅಗಲಿಕೆಯ ನೋವನ್ನೇ ಇನ್ನೂ ಅವರಿಗೆ ಅರಗಿಸಿಕೊಳ್ಳಲು ಆಗುತ್ತಿರಲಿಲ್ಲ. ಅಪ್ಪು ಬಗ್ಗೆ ಮಾತು ಬಂದಾಗೆಲ್ಲ ಬಿಕ್ಕಿಬಿಕ್ಕಿ ಮಗು ಥರಹ ಕಣ್ಣೀರಿಟ್ಟಿರೋದನ್ನ ಫ್ಯಾನ್ಸ್ ನೋಡಿದ್ದಾರೆ. ಆ ನೋವಿನ ಗಾಯದ ಮೇಲೆ ಮತ್ತೊಂದು ಬರೆ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪತ್ನಿಯ ಅಗಲಿಕೆ.
ಫ್ಯಾಮಿಲಿ ಜೊತೆ ತುಂಬಾನೇ ಅಟ್ಯಾಚ್ ಆಗಿರೋ ರಾಘು, ಭಾವುಕ ಜೀವಿ. ಶೋಗಳಲ್ಲಿ ಕುಟುಂಬದವರ ಬಗ್ಗೆ ಮಾತನಾಡುತ್ತಾ ಭಾವುಕರಾಗುತ್ತಿದ್ದರು. ಮೊನ್ನೆ ತಮ್ಮ ಸಹೋದರಿ ಬಗ್ಗೆ ಮಾತನಾಡಿದ್ದರು. ಈಗ ಪ್ರೀತಿಯ ಮಡದಿ ಇನ್ನಿಲ್ಲ ಅನ್ನೋ ನೋವಿನ ಜೊತೆಗೆ ಮಗನ ಭವಿಷ್ಯ ರಾಘು ಹೆಗಲ ಮೇಲಿದೆ. ಎಲ್ಲಾ ನೋವುಗಳನ್ನ ಮರೆತು ಮಗ ಶೌರ್ಯನಿಗಾಗಿ ಬದುಕನ್ನ ಮತ್ತೆ ಕಟ್ಟಿಕೊಳ್ಳುವ ಸ್ಥೈರ್ಯವನ್ನ ತೆಗೆದುಕೊಳ್ಳಬೇಕಿದೆ. ಕಲಾವಿದರ ಶಕ್ತಿ, ಸ್ಥೈರ್ಯನೇ ಅವರ ಕೆಲಸ. ರಾಘು ಕೂಡ ತಮ್ಮ ಕೆಲಸವನ್ನ ದೈವದಂತೆ ಪೂಜಿಸುವ ವ್ಯಕ್ತಿ. ಹೀಗಾಗಿ ಕೊಂಚ ಗ್ಯಾಪ್ನ ನಂತರ ಮತ್ತೆ ಶೋಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಒಟ್ಟಿನಲ್ಲಿ ಎಂದಿಗೂ ಮಾಸದ ಘಾಡವಾದ ಗಾಯ ರಾಘು ಮನಸ್ಸಿಗಾಗಿದೆ. ಆದಷ್ಟು ಬೇಗ ರಾಘು ಈ ನೋವಿನಿಂದ ಹೊರಬರುವಂತಾಗಲಿ ಮತ್ತೆ ಎಲ್ಲರ ಜೊತೆ ಬರೆಯುವಂತಾಗಲಿ ಅನ್ನೋದು ಅಭಿಮಾನಿಗಳ ಆಶಯ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…