ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ರಾಜೇಶ್ ನಾಯ್ಕ್ ರವರು ಧ್ವಜಾರೋಹಣವನ್ನು ನೆರವೇರಿಸಿ ಕೊಟ್ಟರು ಕಾರ್ಯಕ್ರಮದಲ್ಲಿ ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸದಾಶಿವ ಸಾಲ್ಯಾನ್, ವಿಶ್ವ ಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ಅಧ್ಯಕ್ಷರಾದ ದಿನಕರ ಸಾಲ್ಯಾನ್, ಕೋರ್ದಬ್ಬು ದೈವಸ್ಥಾನ ಹತ್ತನೇ ತೋಕೂರು ಇದರ ಗುರಿಕಾರರಾದ ಗೋಪಾಲಕೃಷ್ಣ ಸಾಲ್ಯಾನ್, ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇಲ್ಲಿನ ಗೌರವಾಧ್ಯಕ್ಷರಾದ ಗಣೇಶ್ ಜಿ ಬಂಗೇರ, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಉಪಾಧ್ಯಕ್ಷರಾದ ಭೋಜಕೋಟ್ಯಾನ್ ಕಾರ್ಯದರ್ಶಿ ಹಿಮಕರ್ ಕೋಶಾಧಿಕಾರಿ ನವೀನ್ ಚಂದ್ರ ಮತ್ತು ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ ಆಹ್ವಾನಿತ ತಂಡಗಳಿಗೆ ವಾಲಿಬಾಲ್ ಕ್ರೀಡಾಕೂಟವನ್ನು ನೆರವೇರಿಸಿ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಮಹಮ್ಮದ್ ಶರೀಫ್ ರವರು ನಿರೂಪಿಸಿದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…