ಕರಾವಳಿ

ಗುಂಡ್ಯಡ್ಕ ದೇವಸ್ಥಾನ: ಪುರುಷೋತ್ತಮ ಮಾಸ, ಧಾರ್ಮಿಕ ಆಚರಣೆಯ ಸಮಾರೋಪ, ಧಾರ್ಮಿಕ ಉಪನ್ಯಾಸ

ದಕ್ಷಿಣ ಕನ್ನಡ : ಶ್ರೀ ವಿಠೋಬ   ರುಕುಮಾಯಿ  ದೇವಸ್ಥಾನ ಶ್ರೀನಿವಾಸಪುರ ಗುಂಡ್ಯಡ್ಕ  ಮೂಡಬಿದಿರೆ, ಇಲ್ಲಿ ಒಂದು ತಿಂಗಳ ಕಾಲ ಪುರುಷೋತ್ತಮ ಮಾಸದ ಪ್ರಯುಕ್ತ ಎರ್ಪಲೆ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ನೇತೃತ್ವದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಧಾರ್ಮಿಕ, ಸಾಂಸ್ಕೃತಿಕ, ಉಪನ್ಯಾಸ ಮಾಲಿಕೆ, ಪೂಜೆ, ಭಜನೆ, ಹೋಮ, ಅನ್ನದಾನ ಯಶಸ್ವಿಯಾಗಿ ಸಂಪನ್ನಗೊಂಡು ದೇವಸ್ಥಾನದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಿತು.

        ಸುಬ್ರಮಣ್ಯ ಭಟ್ ರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ, ವೇದಮೂರ್ತಿ ಹರಿನಾರಾಯಣ ಅಸ್ರಣ್ಣ ಕಟೀಲು ಇವರು ಧಾರ್ಮಿಕ ಉಪನ್ಯಾಸ ನೀಡಿದರು.

   ಸಭಾಧ್ಯಕ್ಷತೆಯನ್ನು ವಿಠೋಬಾ ರುಕುಮಾಯಿ  ಈ ದೇವಸ್ಥಾನದ ಅಧ್ಯಕ್ಷರಾದ ಪಾಂಡುರಂಗ ಸಪ್ರೆ ವಹಿಸಿದ್ದರು, ಸಭೆಯಲ್ಲಿ ಮಂಗಳೂರು ರಾಧಾಕೃಷ್ಣ ದೇವಸ್ಥಾನದ ವೇದಮೂರ್ತಿ ಗಿರಿಧರ ಭಟ್, ಉದ್ಯಮಿ ಶ್ರೀಪತಿ ಭಟ್, ಎಂಸಿಸಿ ಬ್ಯಾಂಕಿನ ಚಂದ್ರಶೇಖರ್ ರಾವ್, ರಾಮಚಂದ್ರ ಪವನಸ್ಕರ್, ಉಮೇಶ ಪರಾಡ್ಕರ್, ರಾಮಚಂದ್ರ ಪಂಡಿತ್, ಶಶಿಕಲಾ ಲೋಕ್ರೆ ಗೌರವ ಅತಿಥಿಗಳಾಗಿ ಆಗಮಿಸಿದ್ದರು.

     ಧಾರ್ಮಿಕ ಉಪನ್ಯಾಸ ನೀಡಿದ ಹರಿನಾರಾಯಣ ಅಸ್ರಣ್ಣ ಕಟೀಲು ಇವರು ಅತಿ ಕಡಿಮೆ ಜನ ಸಂಖ್ಯೆಯ ಕರಾಡ ಬ್ರಾಹ್ಮಣ ಸಮಾಜ, ಉತ್ತಮ ದೇವಸ್ಥಾನ ಹಾಗೂ ಧಾರ್ಮಿಕ ಕೆಲಸಗಳಿಗಾಗಿ ಪ್ರಸಿದ್ಧಿ ಪಡೆದಿದ್ದು, ಮುಂದಿನ ಪೀಳಿಗೆಗೆ ಮಾದರಿ ಎಂದರು ವೇದಮೂರ್ತಿ ಗಿರಿಧರ ಭಟ್ ಮಾತನಾಡಿ ವೇದ ಪುರಾಣಗಳು, ಶಾಸ್ತ್ರ ಗ್ರಂಥಗಳು  ಹೇಳಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ ಮತ್ತು ಸಮಾಜವನ್ನ ಮುನ್ನಡೆಸಬೇಕಿದೆ ಎಂದರು.

    ಉದ್ಯಮಿ ಶ್ರೀಪತಿ ಭಟ್ ಮಾತನಾಡಿ ತನ್ನ ಮತ್ತು ದೇವಸ್ಥಾನದ ಒಡನಾಟ, ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಬಗ್ಗೆ ವಿವರಿಸಿದರು,  ಶಶಿಕಲಾ ಲೋಕ್ರೆ   ಮಾತನಾಡಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಮಹಿಳೆಯರ ಭಾಗವಹಿಸುವಿಕೆ, ಮತ್ತು ಮಾನಸಿಕ ನೆಮ್ಮದಿಯನ್ನ ತಿಳಿಸಿದರು.

    ಕಾರ್ಯಕ್ರಮದ ಪ್ರಸಾರಕ್ಕಾಗಿ ಸಹಕರಿಸಿದ ಪತ್ರಕರ್ತ ಡಾಕ್ಟರ್ ರಾಜೇಶ್ ಭಟ್ ಮಂದಾರ ಇವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದ ನಿರೂಪಣೆ, ಸ್ವಾಗತ, ಹಾಗೂ ಧನ್ಯವಾದಗಳು ಲಕ್ಷ್ಮಿಕಾಂತ್ ಭಟ್ ನೆರವೇರಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

4 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

4 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

9 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

10 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

10 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

10 hours ago