ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಾಜೆ ಎಂಬಲ್ಲಿ ನಡೆದಿದೆ. ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈತ ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದ. ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹ ಜೀವಿಯಾಗಿದ್ದುಕೊಂಡಿದ್ದ ಜೊತೆಗೆ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ.

ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ, ಇದೀಗ ಸದಸ್ಯನಾಗಿ ಸೇವೆ ಮಾಡುತ್ತಿದ್ದನು ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ದಳ ಹಾಗೂ ಗೂಡಿನ ಬಳಿಯ ಮುಳುಗುತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.



