ಜನ ಮನದ ನಾಡಿ ಮಿಡಿತ

Advertisement

ಬಿಯರ್ ಪ್ರಿಯರೇ ಎಚ್ಚರ..! ಕಿಂಗ್‌ಫಿಶರ್‌ನಲ್ಲಿ ಜೀವಕ್ಕೆ ಅಪಾಯವಾಗುವ ಅಂಶ ಸೆಡಿಮೆಂಟ್ ಪತ್ತೆ..!!

ಕಿಂಗ್‌ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್‌ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಜೊತೆಗೆ ನಂಜನಗೂಡಿನಿಂದ ಬಿಯರ್ ಸರಬರಾಜು ಆಗುವುದನ್ನು ಅಬಕಾರಿ ಅಧಿಕಾರಿಗಳು ತಡೆಹಿಡಿದಿದ್ದಾರೆ. ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.

ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್‌ಹೌಸ್ ಕೆಮಿಸ್ಟ್ ವರದಿ ನೀಡಿದ್ದು ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಕಿಂಗ್ ಫಿಶರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಜುಲೈ 15ರಂದು ನಂಜನಗೂಡಿನಲ್ಲಿ ಕೆಲವೇ ಕೆಲವು ಬಿಯರ್ ಬಾಟಲ್‌ಗಳಲ್ಲಿ ಸಣ್ಣ ಪ್ರಮಾಣದ ಮಬ್ಬು ಕಾಣಿಸಿಕೊಂಡಿತ್ತಷ್ಟೇ. ಇದರಿಂದ ಆರೋಗ್ಯಕ್ಕೆ ಅಪಾಯವಿಲ್ಲ. ನಾವು ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ಪಾರದರ್ಶಕತೆ ಮತ್ತು ಸಹಕಾರಕ್ಕೆ ಆದ್ಯತೆ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸುತ್ತಿದ್ದೇವೆ.

ನಮ್ಮ ಎಲ್ಲಾ ಉತ್ಪನ್ನಗಳು ನಿಗದಿತ ನಿಯಂತ್ರಕ ಮಾರ್ಗಸೂಚಿಗಳಿಗೆ ಬದ್ಧವಾಗಿರುತ್ತವೆ ಮತ್ತು ಉತ್ತಮ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಯುನೈಟೆಡ್ ಬ್ರಿವರೀಸ್ ಲಿಮಿಟೆಡ್‌ನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!