ಜನ ಮನದ ನಾಡಿ ಮಿಡಿತ

Advertisement

ಬಿಯರ್ ಪ್ರಿಯರೇ ಎಚ್ಚರ..! ಕಿಂಗ್‌ಫಿಶರ್‌ನಲ್ಲಿ ಜೀವಕ್ಕೆ ಅಪಾಯವಾಗುವ ಅಂಶ ಸೆಡಿಮೆಂಟ್ ಪತ್ತೆ..!!

ಕಿಂಗ್‌ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್‌ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಜೊತೆಗೆ ನಂಜನಗೂಡಿನಿಂದ ಬಿಯರ್ ಸರಬರಾಜು ಆಗುವುದನ್ನು ಅಬಕಾರಿ ಅಧಿಕಾರಿಗಳು ತಡೆಹಿಡಿದಿದ್ದಾರೆ. ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.

ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್‌ಹೌಸ್ ಕೆಮಿಸ್ಟ್ ವರದಿ ನೀಡಿದ್ದು ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಕಿಂಗ್ ಫಿಶರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಜುಲೈ 15ರಂದು ನಂಜನಗೂಡಿನಲ್ಲಿ ಕೆಲವೇ ಕೆಲವು ಬಿಯರ್ ಬಾಟಲ್‌ಗಳಲ್ಲಿ ಸಣ್ಣ ಪ್ರಮಾಣದ ಮಬ್ಬು ಕಾಣಿಸಿಕೊಂಡಿತ್ತಷ್ಟೇ. ಇದರಿಂದ ಆರೋಗ್ಯಕ್ಕೆ ಅಪಾಯವಿಲ್ಲ. ನಾವು ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ಪಾರದರ್ಶಕತೆ ಮತ್ತು ಸಹಕಾರಕ್ಕೆ ಆದ್ಯತೆ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸುತ್ತಿದ್ದೇವೆ.

ನಮ್ಮ ಎಲ್ಲಾ ಉತ್ಪನ್ನಗಳು ನಿಗದಿತ ನಿಯಂತ್ರಕ ಮಾರ್ಗಸೂಚಿಗಳಿಗೆ ಬದ್ಧವಾಗಿರುತ್ತವೆ ಮತ್ತು ಉತ್ತಮ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಯುನೈಟೆಡ್ ಬ್ರಿವರೀಸ್ ಲಿಮಿಟೆಡ್‌ನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!