ಕಿಂಗ್ಫಿಶರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಜೊತೆಗೆ ನಂಜನಗೂಡಿನಿಂದ ಬಿಯರ್ ಸರಬರಾಜು ಆಗುವುದನ್ನು ಅಬಕಾರಿ ಅಧಿಕಾರಿಗಳು ತಡೆಹಿಡಿದಿದ್ದಾರೆ. ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರಿಟೈಲ್ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.
ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್ಹೌಸ್ ಕೆಮಿಸ್ಟ್ ವರದಿ ನೀಡಿದ್ದು ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ ಕಿಂಗ್ ಫಿಶರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಜುಲೈ 15ರಂದು ನಂಜನಗೂಡಿನಲ್ಲಿ ಕೆಲವೇ ಕೆಲವು ಬಿಯರ್ ಬಾಟಲ್ಗಳಲ್ಲಿ ಸಣ್ಣ ಪ್ರಮಾಣದ ಮಬ್ಬು ಕಾಣಿಸಿಕೊಂಡಿತ್ತಷ್ಟೇ. ಇದರಿಂದ ಆರೋಗ್ಯಕ್ಕೆ ಅಪಾಯವಿಲ್ಲ. ನಾವು ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ಪಾರದರ್ಶಕತೆ ಮತ್ತು ಸಹಕಾರಕ್ಕೆ ಆದ್ಯತೆ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸುತ್ತಿದ್ದೇವೆ.
ನಮ್ಮ ಎಲ್ಲಾ ಉತ್ಪನ್ನಗಳು ನಿಗದಿತ ನಿಯಂತ್ರಕ ಮಾರ್ಗಸೂಚಿಗಳಿಗೆ ಬದ್ಧವಾಗಿರುತ್ತವೆ ಮತ್ತು ಉತ್ತಮ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…
ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್…
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…