ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ.
ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು.
ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.
ಈ ಬಗ್ಗೆ ಚಂದ್ರ ಗೌಡ ಅವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…