ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ.
ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು.
ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.
ಈ ಬಗ್ಗೆ ಚಂದ್ರ ಗೌಡ ಅವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…