ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ.
ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು.
ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.
ಈ ಬಗ್ಗೆ ಚಂದ್ರ ಗೌಡ ಅವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…