ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ನಡೆದಿದೆ.
ಎಡಪದವು ಗ್ರಾಮದ ಹೊಸ ಗದ್ದೆ ನಿವಾಸಿ ಚಂದ್ರ ಗೌಡ ಅವರ ಒಂದು ಕರು ಮತ್ತು ಪರಿಸರದ ನಿವಾಸಿಯೊಬ್ಬರ ಎರಡು ದನಗಳು ಕಳವಾಗಿವೆ. ಆ. 14 ರಂದು ಮೇಯಲು ಹೋಗಿದ್ದ ಚಂದ್ರ ಗೌಡ ಅವರ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ.
ಈ ಬಗ್ಗೆ ಆ. 15 ರಂದು ಸಂಜೆ ಧೂಮಚಡವು ಆಟೋ ರಿಕ್ಷಾ ಪಾರ್ಕ್ ಬಳಿ ಹುಡುಕಾಟ ನಡೆಸುತ್ತಿದ್ದಾಗ ಪರಿಚಯದ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು.
ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಂಗಡಿಯ ಮುಂದೆ ಮಲಗಿದ್ದ ದನಗಳನ್ನು ಮತ್ತು ಕರುವನ್ನು ತಡ ರಾತ್ರಿ ವೇಳೆ ಇಬ್ಬರು ಕಳ್ಳರು ಹಿಡಿದು ಕಟ್ಟಿ ಕಾರಿನಲ್ಲಿ ತುಂಬಿಸುತ್ತಿರುವ ದೃಶ್ಯ ಸೆರೆಯಾಗಿರುವುದು ಕಂಡು ಬಂದಿದೆ.
ಈ ಬಗ್ಗೆ ಚಂದ್ರ ಗೌಡ ಅವರು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…