ಶ್ರೀ ವಿಠೋಬ ಭಜನಾ ಮಂದಿರ ಪಂಜ ಕೊಯಿಕುಡೆ ಇದರ 77ನೇ ವರ್ಷದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸದಾನಂದ ಎಂ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಸತೀಶ್ ಎಂ ಶೆಟ್ಟಿ ಬೈಲಗುತ್ತು ಅಲಂಕರಿಸಿದರು. ಮುಖ್ಯ ಅತಿಥಿಯಾಗಿ ಸುರೇಶ್ ಭಟ್ ಪಂಜ ಮಹಾ ಗಣಪತಿ ಮಂದಿರ, ವಿಶ್ವನಾಥ ಶೆಟ್ಟಿ ಪಂಜದ ಗುತ್ತು ,ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ್ ಪಂಜ, ಸೀತಾರಾಮ ಅಮಿನ್ ಚಾಮುಂಡೇಶ್ವರಿ ಸನ್ನಿಧಿ ಪಂಜ, ನವೀನ್ ಕುಮಾರ್ ಶೆಟ್ಟಿ ಅಧ್ಯಕ್ಷರು ಶನೇಶ್ವರ ಮಂಡಳಿ ಪಂಜ ಕೊಯಿಕುಡೆ, ನವೀನ್ ಶೆಟ್ಟಿ ನಲ್ಯ ಗುತ್ತು ಅಧ್ಯಕ್ಷರು ಹಾಲು ಉತ್ಪಾದಕರ ಸಂಘ ಪಂಜ ಕೊಯಿಕುಡೆ, ಪಂಜ ಶಾಲಾ ಮುಖ್ಯ ಶಿಕ್ಷಕಿಯಾದ ಐರಿನ್ ಡಿಸೋಜ, ನವಜೋತಿ ಮಹಿಳಾ ಮಂಡಲದ ಅಧ್ಯಕ್ಷರಾದ ಅಮಿತಾ ದೇವಾಡಿಗ, ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿವಪ್ಪ ಶೆಟ್ಟಿ ಪಡುಮನೆ ಮೊಗಪಾಡಿ ಸಾಹಿತಿ ಲೇಖಕ ಇವರನ್ನು ಸನ್ಮಾನಿಸಲಾಯಿತು. ಸತೀಶ್ ಎಂ ಶೆಟ್ಟಿ ಬೈಲಗುತ್ತು ಕಾರ್ಯಕ್ರಮ ನಿರೂಪಿಸಿದರು. ಪದ್ಮನಾಭ ಪೂಜಾರಿ ಸ್ವಾಗತಿಸಿದರು. ಭರತ್ ಶೆಟ್ಟಿ ಪಂಜ ಧನ್ಯವಾದ ಅರ್ಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…