ಜನ ಮನದ ನಾಡಿ ಮಿಡಿತ

Advertisement

ವಿಮಾನದಲ್ಲಿ ಹಾಟ್ ಚಾಕೊಲೇಟ್ ಸರ್ವ್ ಮಾಡುವಾಗ ಸಿಬ್ಬಂದಿಯ ಯಡವಟ್ಟು..! ಬಾಲಕಿ ಸ್ಥಿತಿ ಗಂಭೀರ..


ಚಲಿಸುತ್ತಿದ್ದ ವಿಮಾನದಲ್ಲಿ ಹಾಟ್ ಚಾಕೊಲೇಟ್ ಸರ್ವ್ ಮಾಡುವಾಗ 10 ವರ್ಷದ ಬಾಲಕಿ ಮೇಲೆ ಬಿದ್ದು, ಸುಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ‘ವಿಸ್ತಾರ’ ವಿಮಾನದಲ್ಲಿ ನಡೆದಿದೆ.
ಇದೀಗ ವಿಮಾನ ಸಂಸ್ಥೆ ‘ವಿಸ್ತಾರ’ ಗಾಯಗೊಂಡಿರುವ ಬಾಲಕಿ ಚಿಕಿತ್ಸೆಗೆ ತಗುಲುವ ಎಲ್ಲಾ ಖರ್ಚುಗಳ ಜವಾಬ್ದಾರಿ ತನ್ನದು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.


ಕಳೆದ ಬುಧವಾರ ವಿಸ್ತಾರ ಸಂಸ್ಥೆಯ UK25 ವಿಮಾನವು ದೆಹಲಿಯಿಂದ ಜರ್ಮನಿಯ ಫ್ರಂಕ್‌ಫುರ್ಟ್ಗೆ ಹೊರಟಿತ್ತು. ಇದೇ ವಿಮಾನದಲ್ಲಿ 10 ಬಾಲಕಿ ತನ್ನ ಪೋಷಕರೊಂದಿಗೆ ಪ್ರಯಾಣ ಮಾಡುತ್ತಿದ್ದಳು. ಬಾಲಕಿಯ ಪೋಷಕರು ಮಗಳಿಗೆ ಹಾಟ್ ಚಾಕೊಲೇಟ್ ನೀಡುವಂತೆ ವಿಮಾನದ ಸಿಬ್ಬಂದಿಗೆ ಹೇಳಿಕೊಂಡಿದ್ದಾರೆ. ಅಂತೆಯೇ ಚಾಕೊಲೇಟ್ ಸರ್ವ್ ಮಾಡಲು ವಿಮಾನದ ಸಿಬ್ಬಂದಿ ಅಲ್ಲಿಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಹಾಟ್ ಚಾಕೊಲೇಟ್‌ನ ವಾಟರ್ ಆಕೆಯ ಮೇಲೆ ಬಿದ್ದಿದೆ.


ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಕರೆ ಮಾಡಲಾಗಿತ್ತು. ವಿಮಾನ ಫ್ರಂಕ್‌ಪುರ್ಟ್ನಲ್ಲಿ ಲ್ಯಾಂಡ್ ಆಗ್ತಿದ್ದಂತೆಯೇ, ಮೆಡಿಕಲ್ ಕೇರ್ ಟೀಂ ಅಲ್ಲಿಗೆ ಬಂದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಅಮ್ಮ ಕೂಡ ಆಸ್ಪತ್ರೆಗೆ ಬಂದಿದ್ದರು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.

ಘಟನೆ ನಡೆದು ಎರಡು ದಿನಗಳ ಬಳಿಕ ಟ್ವಿಟರ್‌ನಲ್ಲಿ ಈ ವಿಚಾರ ಸ್ಫೋಟಗೊಂಡಿತ್ತು. ರಚ್ನಾ ಗುಪ್ತಾ ಅನ್ನೋರು ಟ್ವೀಟ್ ಮಾಡಿ, ವಿಮಾನ ಸಂಸ್ಥೆಯ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಘಟನೆ ಬಗ್ಗೆ ವಿಮಾನ ಸಂಸ್ಥೆ ಕನಿಷ್ಠ ವಿಷಾದ ಕೂಡ ವ್ಯಕ್ತಪಡಿಸಿಲ್ಲ ಎಂದು ಕಿಡಿಕಾರಿದ್ದರು. ಇದೀಗ ಪ್ರತಿಕ್ರಿಯಿಸಿರುವ ವಿಮಾನ ಸಂಸ್ಥೆ ವಿಸ್ತಾರ್.. ಕೂಡಲೇ ನಮ್ಮ ಸಿಬ್ಬಂದಿ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಿವಿ. ಆಕೆಗೆ ವೈದ್ಯಕೀಯ ವೆಚ್ಚಕ್ಕೆ ತಗಲುವ ಎಲ್ಲಾ ಖರ್ಚನ್ನು ಸಂಸ್ಥೆಯೇ ಬರಿಸಲಿದೆ ಎಂದು ಹೇಳಿಕೊಂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!