ಚಲಿಸುತ್ತಿದ್ದ ವಿಮಾನದಲ್ಲಿ ಹಾಟ್ ಚಾಕೊಲೇಟ್ ಸರ್ವ್ ಮಾಡುವಾಗ 10 ವರ್ಷದ ಬಾಲಕಿ ಮೇಲೆ ಬಿದ್ದು, ಸುಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ‘ವಿಸ್ತಾರ’ ವಿಮಾನದಲ್ಲಿ ನಡೆದಿದೆ.
ಇದೀಗ ವಿಮಾನ ಸಂಸ್ಥೆ ‘ವಿಸ್ತಾರ’ ಗಾಯಗೊಂಡಿರುವ ಬಾಲಕಿ ಚಿಕಿತ್ಸೆಗೆ ತಗುಲುವ ಎಲ್ಲಾ ಖರ್ಚುಗಳ ಜವಾಬ್ದಾರಿ ತನ್ನದು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.
ಕಳೆದ ಬುಧವಾರ ವಿಸ್ತಾರ ಸಂಸ್ಥೆಯ UK25 ವಿಮಾನವು ದೆಹಲಿಯಿಂದ ಜರ್ಮನಿಯ ಫ್ರಂಕ್ಫುರ್ಟ್ಗೆ ಹೊರಟಿತ್ತು. ಇದೇ ವಿಮಾನದಲ್ಲಿ 10 ಬಾಲಕಿ ತನ್ನ ಪೋಷಕರೊಂದಿಗೆ ಪ್ರಯಾಣ ಮಾಡುತ್ತಿದ್ದಳು. ಬಾಲಕಿಯ ಪೋಷಕರು ಮಗಳಿಗೆ ಹಾಟ್ ಚಾಕೊಲೇಟ್ ನೀಡುವಂತೆ ವಿಮಾನದ ಸಿಬ್ಬಂದಿಗೆ ಹೇಳಿಕೊಂಡಿದ್ದಾರೆ. ಅಂತೆಯೇ ಚಾಕೊಲೇಟ್ ಸರ್ವ್ ಮಾಡಲು ವಿಮಾನದ ಸಿಬ್ಬಂದಿ ಅಲ್ಲಿಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಹಾಟ್ ಚಾಕೊಲೇಟ್ನ ವಾಟರ್ ಆಕೆಯ ಮೇಲೆ ಬಿದ್ದಿದೆ.
ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಕರೆ ಮಾಡಲಾಗಿತ್ತು. ವಿಮಾನ ಫ್ರಂಕ್ಪುರ್ಟ್ನಲ್ಲಿ ಲ್ಯಾಂಡ್ ಆಗ್ತಿದ್ದಂತೆಯೇ, ಮೆಡಿಕಲ್ ಕೇರ್ ಟೀಂ ಅಲ್ಲಿಗೆ ಬಂದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಅಮ್ಮ ಕೂಡ ಆಸ್ಪತ್ರೆಗೆ ಬಂದಿದ್ದರು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.
ಘಟನೆ ನಡೆದು ಎರಡು ದಿನಗಳ ಬಳಿಕ ಟ್ವಿಟರ್ನಲ್ಲಿ ಈ ವಿಚಾರ ಸ್ಫೋಟಗೊಂಡಿತ್ತು. ರಚ್ನಾ ಗುಪ್ತಾ ಅನ್ನೋರು ಟ್ವೀಟ್ ಮಾಡಿ, ವಿಮಾನ ಸಂಸ್ಥೆಯ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಘಟನೆ ಬಗ್ಗೆ ವಿಮಾನ ಸಂಸ್ಥೆ ಕನಿಷ್ಠ ವಿಷಾದ ಕೂಡ ವ್ಯಕ್ತಪಡಿಸಿಲ್ಲ ಎಂದು ಕಿಡಿಕಾರಿದ್ದರು. ಇದೀಗ ಪ್ರತಿಕ್ರಿಯಿಸಿರುವ ವಿಮಾನ ಸಂಸ್ಥೆ ವಿಸ್ತಾರ್.. ಕೂಡಲೇ ನಮ್ಮ ಸಿಬ್ಬಂದಿ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಿವಿ. ಆಕೆಗೆ ವೈದ್ಯಕೀಯ ವೆಚ್ಚಕ್ಕೆ ತಗಲುವ ಎಲ್ಲಾ ಖರ್ಚನ್ನು ಸಂಸ್ಥೆಯೇ ಬರಿಸಲಿದೆ ಎಂದು ಹೇಳಿಕೊಂಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…