ಚಲಿಸುತ್ತಿದ್ದ ವಿಮಾನದಲ್ಲಿ ಹಾಟ್ ಚಾಕೊಲೇಟ್ ಸರ್ವ್ ಮಾಡುವಾಗ 10 ವರ್ಷದ ಬಾಲಕಿ ಮೇಲೆ ಬಿದ್ದು, ಸುಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ‘ವಿಸ್ತಾರ’ ವಿಮಾನದಲ್ಲಿ ನಡೆದಿದೆ.
ಇದೀಗ ವಿಮಾನ ಸಂಸ್ಥೆ ‘ವಿಸ್ತಾರ’ ಗಾಯಗೊಂಡಿರುವ ಬಾಲಕಿ ಚಿಕಿತ್ಸೆಗೆ ತಗುಲುವ ಎಲ್ಲಾ ಖರ್ಚುಗಳ ಜವಾಬ್ದಾರಿ ತನ್ನದು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.
ಕಳೆದ ಬುಧವಾರ ವಿಸ್ತಾರ ಸಂಸ್ಥೆಯ UK25 ವಿಮಾನವು ದೆಹಲಿಯಿಂದ ಜರ್ಮನಿಯ ಫ್ರಂಕ್ಫುರ್ಟ್ಗೆ ಹೊರಟಿತ್ತು. ಇದೇ ವಿಮಾನದಲ್ಲಿ 10 ಬಾಲಕಿ ತನ್ನ ಪೋಷಕರೊಂದಿಗೆ ಪ್ರಯಾಣ ಮಾಡುತ್ತಿದ್ದಳು. ಬಾಲಕಿಯ ಪೋಷಕರು ಮಗಳಿಗೆ ಹಾಟ್ ಚಾಕೊಲೇಟ್ ನೀಡುವಂತೆ ವಿಮಾನದ ಸಿಬ್ಬಂದಿಗೆ ಹೇಳಿಕೊಂಡಿದ್ದಾರೆ. ಅಂತೆಯೇ ಚಾಕೊಲೇಟ್ ಸರ್ವ್ ಮಾಡಲು ವಿಮಾನದ ಸಿಬ್ಬಂದಿ ಅಲ್ಲಿಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಹಾಟ್ ಚಾಕೊಲೇಟ್ನ ವಾಟರ್ ಆಕೆಯ ಮೇಲೆ ಬಿದ್ದಿದೆ.
ಕೂಡಲೇ ಆಕೆಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಕರೆ ಮಾಡಲಾಗಿತ್ತು. ವಿಮಾನ ಫ್ರಂಕ್ಪುರ್ಟ್ನಲ್ಲಿ ಲ್ಯಾಂಡ್ ಆಗ್ತಿದ್ದಂತೆಯೇ, ಮೆಡಿಕಲ್ ಕೇರ್ ಟೀಂ ಅಲ್ಲಿಗೆ ಬಂದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಅಮ್ಮ ಕೂಡ ಆಸ್ಪತ್ರೆಗೆ ಬಂದಿದ್ದರು ಎಂದು ವಿಮಾನ ಸಂಸ್ಥೆ ಹೇಳಿಕೊಂಡಿದೆ.
ಘಟನೆ ನಡೆದು ಎರಡು ದಿನಗಳ ಬಳಿಕ ಟ್ವಿಟರ್ನಲ್ಲಿ ಈ ವಿಚಾರ ಸ್ಫೋಟಗೊಂಡಿತ್ತು. ರಚ್ನಾ ಗುಪ್ತಾ ಅನ್ನೋರು ಟ್ವೀಟ್ ಮಾಡಿ, ವಿಮಾನ ಸಂಸ್ಥೆಯ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾತ್ರವಲ್ಲ, ಘಟನೆ ಬಗ್ಗೆ ವಿಮಾನ ಸಂಸ್ಥೆ ಕನಿಷ್ಠ ವಿಷಾದ ಕೂಡ ವ್ಯಕ್ತಪಡಿಸಿಲ್ಲ ಎಂದು ಕಿಡಿಕಾರಿದ್ದರು. ಇದೀಗ ಪ್ರತಿಕ್ರಿಯಿಸಿರುವ ವಿಮಾನ ಸಂಸ್ಥೆ ವಿಸ್ತಾರ್.. ಕೂಡಲೇ ನಮ್ಮ ಸಿಬ್ಬಂದಿ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಿವಿ. ಆಕೆಗೆ ವೈದ್ಯಕೀಯ ವೆಚ್ಚಕ್ಕೆ ತಗಲುವ ಎಲ್ಲಾ ಖರ್ಚನ್ನು ಸಂಸ್ಥೆಯೇ ಬರಿಸಲಿದೆ ಎಂದು ಹೇಳಿಕೊಂಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…