ಬೆಳ್ಳಂಬೆಳಗ್ಗೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಚಿತ್ರದರ್ಗ, ದಾವಣಗೆರೆ, ಕೊಡಗು ಸೇರಿದಂತೆ ಹಲವೆಡೆ ದಾಳಿಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನಿಯರ್ ಕೆ.ಮಹೇಶ್, ಬಿಬಿಎಂಪಿ AE ಎಚ್. ಭಾರತಿ ಮನೆಯ ಮೇಲೆ ದಾಳಿಯಾಗಿದೆ.
ಚನ್ನಗಿರಿ ತಾಲೂಕಿನ ಆರ್ಎಫ್ಓ ಸತೀಶ್ ಮೇಲೆ ದಾಳಿಯಾಗಿದ್ದು, ಚನ್ನಗಿರಿಯಲ್ಲಿರೋ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸತೀಶ್ 4 ವರ್ಷಕ್ಕೂ ಅಧಿಕ ಚನ್ನಗಿರಿಯಲ್ಲಿ ಆರ್ಎಫ್ಓ ಆಗಿ ಸೇವೆ ಸಲ್ಲಿಸುತಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಕೊಡಗಿನಲ್ಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕೊಡಗು ಎಡಿಸಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿಯಾಗಿದೆ. ಮೂವರು ಇನ್ಸ್ಪೆಕ್ಟರ್ ಮತ್ತು 10ಕ್ಕೂ ಹೆಚ್ಚು ಸಿಬ್ಬಂದಿ ಶೋಧಕರ್ಯ ಶುರುಮಾಡಿದ್ದಾರೆ.




