ಕರಾವಳಿ

ಮಾಣಿಲ ಶ್ರೀವರಮಹಾಲಕ್ಷ್ಮಿ ವೃತಾಚರಣೆಯ ಬೆಳ್ಳಿಹಬ್ಬ ಮಹೋತ್ಸವ : ಆ.20ರಂದು ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಮಾಣಿಲ ಶ್ರೀಧಾಮದಲ್ಲಿ ಆ.25ರವರೆಗೆ ನಡೆಯುವ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ ಹಾಗೂ ಆ.25 ರಿಂದ ಆ. 27ರವರೆಗೆ ಶ್ರೀವರಮಹಾಲಕ್ಷ್ಮಿ ವೃತಾಚರಣೆ ಬೆಳ್ಳಿ ಹಬ್ಬದ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಹೊರೆಕಾಣಿಕೆ ಸಮಿತಿ ನೇತೃತ್ವದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಆ.20ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಪುತ್ತೂರು ವಲಯ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ಮತ್ತು ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ಮಾಣಿಲದಲ್ಲಿರುವ ಮಾಣಿಲ ಶ್ರೀ ದುರ್ಗಾ ಮಹಾಲಕ್ಷೀ ಕ್ಷೇತ್ರವು ನಾಡಿನೆಲ್ಲೆಡೆ ದೇವಸ್ಥಾನ, ದೈವಸ್ಥಾನ, ಮಠ ಮಂದಿರಗಳ ನವೀಕರಣ, ಪುನರ್ ನಿರ್ಮಾಣ, ಜೀರ್ಣೋದ್ದಾರ ಕಾರ್ಯಗಳಿಗೆ ಮಾರ್ಗದರ್ಶನ ನೀಡಿ ಸಾಮಾನ್ಯನಂತೆ ಭಕ್ತರೊಡನೆ ಸ್ಪಂದಿಸುವ ಸಂತ ಯೋಗಿ ಕೌಸ್ತುಭ, ಸತ್ಕರ್ಮ ತಪಸ್ವಿ, ಪರಮಪೂಜನೀಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ತಪೋ ಭೂಮಿಯಾಗಿದೆ. ಶ್ರೀ ಸ್ವಾಮೀಜಿಯವರು ಸನಾತನ ಹಿಂದು ಧರ್ಮದ ಪುನರುಜ್ಞಾನಕ್ಕೆ ಹಾಗೂ ಹಿಂದು ಸಮಾಜದ ಏಳಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿರಿಸಿದ್ದಾರೆ. ದೀನ ದಲಿತರು ದುರ್ಬಲರಿಗೆ ದಾರಿದೀವಿಗೆಯಾಗಿದ್ದಾರೆ.
ಶ್ರೀ ಗಳ ಕ್ಷೇತ್ರದಲ್ಲಿ 48 ದಿನಗಳ ಕಾಲ ನಿರಂತರವಾಗಿ ಶ್ರೀವರಮಹಾಲಕ್ಷ್ಮಿ ವೃತಾಚರಣೆ ಪೂಜೆ ನಡೆಯುತ್ತಿದ್ದು, ಇದರ ಜೊತೆಗೆ 25 ವರ್ಷಗಳನ್ನು ಪೂರೈಸಿ ಬೆಳ್ಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಿಂದ ಬೃಹತ್ ಹೊರಕಾಣಿಕೆಯ ಜೊತೆಗೆ ದೇಣಿಗೆ ಸಮರ್ಪಿಸಬೇಕೆಂದು ಮಾಡಿದ ಸಂಕಲ್ಪದoತೆ ಆ.20ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದ ಗದ್ದೆಯಿಂದ ಬೃಹತ್ ಹೊರೆಕಾಣಿಕೆಯನ್ನು ಮೆರವಣಿಗೆ ಮೂಲಕ ಶ್ರೀಕ್ಷೇತ್ರಕ್ಕೆ ಒಪ್ಪಿಸಲಾಗುವುದು. ಈ ನಿಟ್ಟಿನಲ್ಲಿ ಆ.18ರಂದು ಹೊರೆಕಾಣೀಕೆ ಸ್ವೀಕೃತಿ ಕೌಂಟರ್ ತೆರೆಯಲಾಗುವುದು ಎಂದು ಭಕ್ತರು ಹೊರೆಕಾಣಿಕೆ ಸಮರ್ಪಣೆ ಮಾಡುವಂತೆ ಅವರು ವಿನಂತಿಸಿದರು.

ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆಯವರು ಮಾತನಾಡಿ ಹಿಂದು ಧಾರ್ಮಿಕ ಭಾವನೆಯಲ್ಲಿ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪೂರಕವಾಗಿ ಹೊರೆಕಾಣಿಕೆ ಸಮರ್ಪಣೆ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ 48 ದಿನಗಳ ಕಾಲ ನಡೆಯುವ ಪೂಜೆಯಲ್ಲಿ ಹಲವು ಖರ್ಚುಗಳಾಗುತ್ತದೆ. ಈನಿಟ್ಟಿನಲ್ಲಿ ಕ್ಷೇತ್ರಕ್ಕೆ ಪುತ್ತೂರು ಸಮಿತಿಯಿಂದ ರೂ. 5ಲಕ್ಷವನ್ನು ಆರ್ಥಿಕ ರೂಪದಲ್ಲಿ ನೀಡಲಾಗುತ್ತದೆ. ಉಳಿದಂತೆ ಇಲ್ಲಿ ಯಾರಿಗೂ ಹೊರೆಯಾಗದ ರೀತಿಯಲ್ಲಿ ಹೊರೆಕಾಣಿಕೆ ಸ್ವೀಕರಿಸಲಾಗುವುದು. ಭಕ್ತರು ಮತ್ತು ಕ್ಷೇತ್ರದ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಹೊರೆಕಾಣಿಕೆ ಸಮರ್ಪಣೆ ಮಾಡುವಂತೆ ವಿನಂತಿಸಿದ ಅವರು ಆ.18ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯ ಬಳಿಯಲ್ಲಿ ಹೊರೆಕಾಣಿಕೆ ಸ್ವೀಕೃತಿಯ ಕೌಂಟರ್ ತೆರೆಯಲಾಗುವುದು ಎಂದು ಅವರು ತಿಳಿಸಿದರು.

ಮಾಣಿಲ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಪುತ್ತೂರಿನಲ್ಲಿ ಹಲವು ಧಾರ್ಮಿಕ ಕ್ಷೇತ್ರ ಮತ್ತು ಮಠ ಮಂದಿಗಳ ಜೀರ್ಣೋದ್ದಾರ ಕಾರ್ಯದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಭಾಗವಹಿಸಿದವರು. ಇದೀಗ ಶ್ರೀ ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಪುತ್ತೂರು ಕ್ಷೇತ್ರದ ಭಕ್ತರು ಸಹಕಾರ ನೀಡುವಂತೆ ವಿನಂತಿಸಿಕೊoಡಿದ್ದಾರೆ.
ಇನ್ನೂ ಸುದ್ದಿಗೋಷ್ಠಿಯಲ್ಲಿ ಹೊರೆಕಾಣಿಕೆ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಹೊರೆಕಾಣಿಕೆ ಸಮಿತಿ ಪುತ್ತೂರು ವಲಯ ಸಮಿತಿ ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ಲಕ್ಷ್ಮಣ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

2 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

3 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

4 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

23 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

23 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

24 hours ago