ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಅರೆಮಂಗಿಲ ಸುಬ್ಬಣ್ಣ ನಾಯ್ಕ ಅಸೌಖ್ಯದಿಂದ ನಿಧನ

ಪೆರ್ಲ : ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ ಅರೆಮಂಗಿಲ ಸುಬ್ಬಣ್ಣ ನಾಯ್ಕ ಪಿ. (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತಡ ರಾತ್ರಿ ನಿಧನರಾದರು. ತೀವ್ರ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ತಮ್ಮ ಸ್ವಗೃಹ ಅರೆಮಂಗಿಲದ ಮನೆಯಲ್ಲಿ ನಿಧನರಾಗಿದ್ದಾರೆ.

ಪಳ್ಳಕಾನ ನಿವಾಸಿಗಳಾಗಿದ್ದ ದಿ.ರಾಮನಾಯ್ಕ – ಕಾವೇರಿ ದಂಪತಿಗಳ ಪುತ್ರರಾಗಿದ್ದ ಸುಬ್ಬಣ್ಣ ನಾಯ್ಕ ಆರಂಭದಲ್ಲಿ ಕೆಎಸ್ಸಾರ್ಟಿಸಿ ಇಲಾಖೆಯಲ್ಲಿ ಸರಕಾರಿ ಸೇವೆಗೆ ನಿಯುಕ್ತರಾಗಿ ಬಳಿಕ ಕಂದಾಯ ಇಲಾಖೆಯ ವಿಲೇಜ್ ಆಫೀಸರ್ ಆಗಿ ವಿವಿಧ ಕಡೆಗಳಲ್ಲಿ ಸೇವೆಗೈದಿದ್ದಾರೆ. ಶೇಣಿ, ಪೆರ್ಲ, ಕಾಟುಕುಕ್ಕೆ, ಬಾಯಾರು, ಮೀಂಜ ಮೊದಲಾದ ಕಡೆಗಳಲ್ಲಿ ವಿಲೇಜ್ ಅಧಿಕಾರಿಯಾಗಿದ್ದ ಇವರು ಬಳಿಕ ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಆಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಭವಾನಿ, ಮಕ್ಕಳಾದ ಜಿತಿನ್ ಎಸ್, ನಿವೇದ್ ಹಾಗೂ ಸಹೋದರರಾದ ಈಶ್ವರ ನಾಯ್ಕ, ಗಣೇಶ (ಕೇರಳ ಗ್ರಾಮೀಣ ಬ್ಯಾಂಕ್ ಉದ್ಯೋಗಿ), ಸಹೋದರಿಯರಾದ ದೇವಕಿ, ಗೌರಿ ಎಂಬಿವರನ್ನಗಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!