ಪೆರ್ಲ : ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ ಅರೆಮಂಗಿಲ ಸುಬ್ಬಣ್ಣ ನಾಯ್ಕ ಪಿ. (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತಡ ರಾತ್ರಿ ನಿಧನರಾದರು. ತೀವ್ರ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ತಮ್ಮ ಸ್ವಗೃಹ ಅರೆಮಂಗಿಲದ ಮನೆಯಲ್ಲಿ ನಿಧನರಾಗಿದ್ದಾರೆ.
ಪಳ್ಳಕಾನ ನಿವಾಸಿಗಳಾಗಿದ್ದ ದಿ.ರಾಮನಾಯ್ಕ – ಕಾವೇರಿ ದಂಪತಿಗಳ ಪುತ್ರರಾಗಿದ್ದ ಸುಬ್ಬಣ್ಣ ನಾಯ್ಕ ಆರಂಭದಲ್ಲಿ ಕೆಎಸ್ಸಾರ್ಟಿಸಿ ಇಲಾಖೆಯಲ್ಲಿ ಸರಕಾರಿ ಸೇವೆಗೆ ನಿಯುಕ್ತರಾಗಿ ಬಳಿಕ ಕಂದಾಯ ಇಲಾಖೆಯ ವಿಲೇಜ್ ಆಫೀಸರ್ ಆಗಿ ವಿವಿಧ ಕಡೆಗಳಲ್ಲಿ ಸೇವೆಗೈದಿದ್ದಾರೆ. ಶೇಣಿ, ಪೆರ್ಲ, ಕಾಟುಕುಕ್ಕೆ, ಬಾಯಾರು, ಮೀಂಜ ಮೊದಲಾದ ಕಡೆಗಳಲ್ಲಿ ವಿಲೇಜ್ ಅಧಿಕಾರಿಯಾಗಿದ್ದ ಇವರು ಬಳಿಕ ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಆಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಭವಾನಿ, ಮಕ್ಕಳಾದ ಜಿತಿನ್ ಎಸ್, ನಿವೇದ್ ಹಾಗೂ ಸಹೋದರರಾದ ಈಶ್ವರ ನಾಯ್ಕ, ಗಣೇಶ (ಕೇರಳ ಗ್ರಾಮೀಣ ಬ್ಯಾಂಕ್ ಉದ್ಯೋಗಿ), ಸಹೋದರಿಯರಾದ ದೇವಕಿ, ಗೌರಿ ಎಂಬಿವರನ್ನಗಲಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…