ಪೆರ್ಲ : ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ ಅರೆಮಂಗಿಲ ಸುಬ್ಬಣ್ಣ ನಾಯ್ಕ ಪಿ. (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತಡ ರಾತ್ರಿ ನಿಧನರಾದರು. ತೀವ್ರ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ತಮ್ಮ ಸ್ವಗೃಹ ಅರೆಮಂಗಿಲದ ಮನೆಯಲ್ಲಿ ನಿಧನರಾಗಿದ್ದಾರೆ.
ಪಳ್ಳಕಾನ ನಿವಾಸಿಗಳಾಗಿದ್ದ ದಿ.ರಾಮನಾಯ್ಕ – ಕಾವೇರಿ ದಂಪತಿಗಳ ಪುತ್ರರಾಗಿದ್ದ ಸುಬ್ಬಣ್ಣ ನಾಯ್ಕ ಆರಂಭದಲ್ಲಿ ಕೆಎಸ್ಸಾರ್ಟಿಸಿ ಇಲಾಖೆಯಲ್ಲಿ ಸರಕಾರಿ ಸೇವೆಗೆ ನಿಯುಕ್ತರಾಗಿ ಬಳಿಕ ಕಂದಾಯ ಇಲಾಖೆಯ ವಿಲೇಜ್ ಆಫೀಸರ್ ಆಗಿ ವಿವಿಧ ಕಡೆಗಳಲ್ಲಿ ಸೇವೆಗೈದಿದ್ದಾರೆ. ಶೇಣಿ, ಪೆರ್ಲ, ಕಾಟುಕುಕ್ಕೆ, ಬಾಯಾರು, ಮೀಂಜ ಮೊದಲಾದ ಕಡೆಗಳಲ್ಲಿ ವಿಲೇಜ್ ಅಧಿಕಾರಿಯಾಗಿದ್ದ ಇವರು ಬಳಿಕ ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಆಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಭವಾನಿ, ಮಕ್ಕಳಾದ ಜಿತಿನ್ ಎಸ್, ನಿವೇದ್ ಹಾಗೂ ಸಹೋದರರಾದ ಈಶ್ವರ ನಾಯ್ಕ, ಗಣೇಶ (ಕೇರಳ ಗ್ರಾಮೀಣ ಬ್ಯಾಂಕ್ ಉದ್ಯೋಗಿ), ಸಹೋದರಿಯರಾದ ದೇವಕಿ, ಗೌರಿ ಎಂಬಿವರನ್ನಗಲಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…