ಮುಲ್ಕಿ: ಮುಲ್ಕಿ ಬಸ್ಸು ನಿಲ್ದಾಣದ ಬಳಿ ಕಾರ್ಯಾಚರಿಸುತ್ತಿರುವ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ಪ್ರಧಾನ ರಸ್ತೆಯಲ್ಲಿ ಹರಿಯುತ್ತಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ರೋಗಗಳ ಭೀತಿ ಎದುರಾಗಿದೆ ಎಂದು ಮಾಜೀ ನ. ಪಂ.ಸದಸ್ಯ ಅಬ್ದುಲ್ ರಜಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ನಿಲ್ದಾಣದ ಬಳಿ ಕಾರ್ಯಾಚರಿಸಿರುವ ಫಾತಿಮಾ ಟವರ್ಸ್ ಬಹು ಮಹಡಿ ಕಟ್ಟಡದಲ್ಲಿ ಮಕ್ಕಳ ವಿದ್ಯಾರ್ಥಿ ನಿಲಯದ ತ್ಯಾಜ್ಯ ನೀರು ಪಿಟ್ ನಲ್ಲಿ ಭರ್ತಿಯಾಗಿ ರಸ್ತೆಗೆ ಹರಿಯುತ್ತಿದ್ದು ಕೂಡಲೇ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಮುಲ್ಕಿ ನಗರ ಪಂಚಾಯತಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಕೂಡಲೇ ಕಾರ್ಯಪ್ರವೃತ್ತರಾದ ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್ಎಂ ಮೇಸ್ತ, ಆರೋಗ್ಯಾಧಿಕಾರಿ ಲಿಲ್ಲಿ ನಾಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಗೆ ಕೂಡ ದೂರು ನೀಡಿದ್ದು ಕೂಡಲೇ ಸರಿಪಡಿಸದಿದ್ದರೆ ಕಟ್ಟಡದ ಪರವಾನಿಗೆ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…